ಕರ್ನಾಟಕ

karnataka

By

Published : Apr 24, 2019, 5:08 AM IST

ETV Bharat / state

ಚುನಾವಣಾ ಕರ್ತವ್ಯದಲ್ಲಿ ಮಡಿದವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಚುನಾವಣೆ ಸಂದರ್ಭದಲ್ಲಿ ಸಾವನ್ನಪ್ಪಿದ ಅಧಿಕಾರಿಗಳ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು, ಈ ಹಿನ್ನೆಲೆ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ಪ್ರತಿ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡಲಾಗುತ್ತಿದೆ

15 ಲಕ್ಷ ರೂ. ಪರಿಹಾರ

ಬೆಂಗಳೂರು: ಚುನಾವಣೆ ಕರ್ತವ್ಯದಲ್ಲಿ ಮಡಿದ ಅಧಿಕಾರಿಗಳ ಕುಟುಂಬಕ್ಕೆ ತಲಾ 15ಲಕ್ಷ ರೂ. ಪರಿಹಾರ ನೀಡಲು ಚುನಾವಣಾ ಆಯೋಗ ಆದೇಶ ನೀಡಿದೆ.

ವಿಶೇಷ ಪ್ರಕರಣದಡಿ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಈ‌ ಬಾರಿಯ ರಾಜ್ಯದಲ್ಲಿ ಚುನಾವಣಾ ಕಾರ್ಯದಲ್ಲಿದ್ದ 8 ಜನ ಅಧಿಕಾರಿಗಳು ನಿಧನ ಹೊಂದಿದ್ದಾರೆ. ಈ‌ ಪೈಕಿ ಏಳು ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಒಬ್ಬರು ಅಪಘಾತದಿಂದ ಮೃತ ಪಟ್ಟಿದ್ದಾರೆ.

ಈ ಸಂಬಂಧ‌ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಪರಿಹಾರ ನೀಡುವಂತೆ ನಿರ್ದೇಶನ‌ ನೀಡಿತ್ತು. ಇದೀಗ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ.

For All Latest Updates

ABOUT THE AUTHOR

...view details