ಕರ್ನಾಟಕ

karnataka

By

Published : Jul 31, 2021, 7:43 PM IST

ETV Bharat / state

ಸರ್ಕಾರದಿಂದ ಹೊಸ ಆದೇಶ: ಕೇರಳ- ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ RT-PCR ಕಡ್ಡಾಯ

ಪ್ರಸ್ತುತ, ನೆರೆಯ ಕೇರಳ ಹಾಗೂ ಮಹಾರಾಷ್ಟ್ರದಲ್ಲಿನ ಕೋವಿಡ್ -19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಕೆಳಕಂಡ ವಿಶೇಷ ಸರ್ವೇಕ್ಷಣಾ ಚಟುವಟಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಲು ಸೂಚಿಸಿದೆ.

RTPCR ಪರೀಕ್ಷೆ ಕಡ್ಡಾಯ
RTPCR ಪರೀಕ್ಷೆ ಕಡ್ಡಾಯ

ಬೆಂಗಳೂರು: ನೆರೆ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕೇರಳ ಹಾಗೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಆರ್​​ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ, ನೆರೆಯ ಕೇರಳ ಹಾಗೂ ಮಹಾರಾಷ್ಟ್ರದಲ್ಲಿನ ಕೋವಿಡ್ -19 ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಕೆಳಕಂಡ ವಿಶೇಷ ಸರ್ವೇಕ್ಷಣಾ ಚಟುವಟಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಲು ಸೂಚಿಸಿದೆ. ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರು, ಕೋವಿಡ್ 19 ಲಸಿಕೆಯ ಎರಡೂ ಡೋಸ್​​ಗಳನ್ನು ಪಡೆದಿದ್ದರೂ / ಪಡೆಯದಿದ್ದರೂ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಬಿ - ಪಿಸಿಆರ್ ಪರೀಕ್ಷೆಯ ನಗೆಟವ್ ವರದಿಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ.

ಆದೇಶ ಪ್ರತಿ

ವಿಮಾನ, ರೈಲು, ರಸ್ತೆ ( ಬಸ್ ಹಾಗೂ ಇತರ ಸ್ವಂತ ವಾಹನಗಳ ಮುಖಾಂತರ) ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಮೇಲಿನ ನಿಯಮದ ಪಾಲನೆಯು ಕಡ್ಡಾಯವಾಗಿರುತ್ತದೆ. ಹಾಗೂ ಕೇರಳ ಮತ್ತು ಮಹಾರಾಷ್ಟ್ರದಿಂದ ಹೊರಡುವ ಎಲ್ಲ ವಿಮಾನಗಳಿಗೂ ಅನ್ವಯವಾಗುತ್ತದೆ. ಅದರಂತೆ, 72 ಗಂಟೆಗಳ ಒಳಗೆ ಮಾಡಿಸಿದ ಆರ್ ಟಿ - ಪಿಸಿಆರ್ ನೆಗೆಟವ್ ಟೆಸ್ಟ್ ವರದಿಯನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರವೇ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯವರು ಬೋರ್ಡಿಂಗ್ ಪಾಸ್ ನೀಡಬೇಕು.

ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್ ಟಿ ಪಿಸಿಆರ್ ನೆಗೆಟಿವ್ ಟೆಸ್ಟ್ - ವರದಿಯನ್ನು ಹೊಂದುವುದನ್ನು ಖಚಿತಪಡಿಸಿಕೊಳ್ಳುವುದು ರೈಲ್ವೆ ಪ್ರಾಧಿಕಾರದ ಜವಾಬ್ದಾರಿಯಾಗಿರುತ್ತದೆ.

ಆದೇಶ ಪ್ರತಿ

ಬಸ್‌ನ ಮೂಲಕ ಪ್ರಯಾಣಿಸುವವರು ಆರ್​​ಟಿ - ಪಿಸಿಆರ್ ನೆಗೆಟವ್ ಟೆಸ್ಟ್ ವರದಿ ಹೊಂದುವುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯು ಆಯಾ ಬಸ್‌ ನಿರ್ವಾಹಕರ (bus conductor) ದ್ದಾಗಿದೆ. ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ - ವ್ಯವಹಾರ ಸೇರಿದಂತೆ, ಇತರ ಕಾರಣಗಳಿಗೆ ದೈನಂದಿನವಾಗಿ ಭೇಟಿ ನೀಡುವವರು ಪ್ರತಿ 15 ದಿನಗಳಗೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ.

ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು ಮತ್ತು ಮೈಸೂರು ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್‌ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳಗೆ (ಚಾಲಕರು ಸಹಾಯಕರು/ಪ್ರಯಾಣಿಕರು) ಮೇಲೆ ತಿಳಿಸಿರುವ ನಿಯಮಗಳ ಅನುಪಾಲನೆಗೆ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುವುದು ಹಾಗೂ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಸುವ ಜವಾಬ್ದಾರಿಯು ಆಯಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ.

ಈ ಕೆಳಕಂಡ ಪ್ರಕರಣಗಳಗೆ / ಸಂದರ್ಭಗಳಲ್ಲಿ ಆರ್‌ಟಿ ಪಿಸಿಆರ್ ನೆಗೆಟಪ್ ಟೆಸ್ಟ್ ವರದಿ ಹೊಂದುವುದರಿಂದ ವಿನಾಯಿತಿ ನೀಡಲಾಗಿದೆ.

1. ಸಾಂವಿಧಾನಿಕ ಕಾರ್ಯಕಾರಿಗಳು ( Constitutional functionaries ) ಮತ್ತು ವೈದ್ಯ /ವೈದ್ಯಕೀಯ ಸಿಬ್ಬಂದಿಗಳು.

2. ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು.

3. ಕೇರಳದಿಂದ ತುರ್ತು ಸಂದರ್ಭಗಳಲ್ಲಿ ( ಕುಟುಂಬದಲ್ಲಿ ಮರಣ ಸಂಭವಿಸಿದ ಪಕ್ಷದಲ್ಲ. ವೈದ್ಯಕೀಯ ಚಿಕಿತ್ಸೆ, ಇತ್ಯಾದಿ) ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಮಾದರಿಗಳನ್ನು ಪರೀಕ್ಷೆಗಾಗಿ ಕರ್ನಾಟಕದಲ್ಲಿಯೇ ಸಂಗ್ರಹಿಸಲಾಗುವುದು, ಸದರಿ ಪ್ರಯಾಣಿಕರ ಹೆಸರು. ವಿಳಾಸ, ಸಂಪರ್ಕ ಸಂಖ್ಯೆ, ಇತ್ಯಾದಿ ಪೂರ್ಣ ವಿವರಗಳನ್ನು ಗುರುತಿನ ಚೀಟಿಯ ಆಧಾರದ ಅನ್ವಯ ಪಡೆಯುವುದು. ಆರ್ ಟಿ ಪಿಸಿ ಆರ್ ಪರೀಕ್ಷೆಯ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಿಷ್ಟಾಚಾರದಂತೆ ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

For All Latest Updates

ABOUT THE AUTHOR

...view details