ಕರ್ನಾಟಕ

karnataka

ETV Bharat / state

ಗ್ರಾಮೀಣ ಮತ್ತು ಜಿಲ್ಲಾ ಮುಖ್ಯ ರಸ್ತೆಗಳು ಮೇಲ್ದರ್ಜೆಗೆ: ಗೋವಿಂದ ಕಾರಜೋಳ - ಗೋವಿಂದ ಕಾರಜೋಳ

ಬಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ 28 ಕಿ.ಮೀ. ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಕಳೆದ ಜೂನ್‍ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದ್ದು, ರಸ್ತೆ ನಿರ್ವಹಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಗೋವಿಂದ ಕಾರಜೋಳ ಹೇಳಿದರು.

govinda-karajola
ಗ್ರಾಮೀಣ ಮತ್ತು ಜಿಲ್ಲಾ ಮುಖ್ಯರಸ್ತೆಗಳು ಮೇಲ್ದರ್ಜೆಗೆ: ಗೋವಿಂದ ಕಾರಜೋಳ

By

Published : Mar 16, 2020, 6:05 PM IST

ಬೆಂಗಳೂರು: ರಾಜ್ಯದಲ್ಲಿ 20 ಸಾವಿರ ಕಿ.ಮೀ. ಗ್ರಾಮೀಣ ಮತ್ತು ಜಿಲ್ಲಾ ಮುಖ್ಯ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಇಂದು ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಾ ತಾಲೂಕುಗಳನ್ನು ಸಮನಾಗಿ ಜಿಲ್ಲಾ ಮತ್ತು ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಬಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ 28 ಕಿ.ಮೀ. ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಕಳೆದ ಜೂನ್‍ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದ್ದು, ರಸ್ತೆ ನಿರ್ವಹಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಈಶ್ವರ್ ಖಂಡ್ರೆ, ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿದ ನಂತರ ರಸ್ತೆ ನಿರ್ವಹಣೆ ಸರಿಯಾಗದೆ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ ಎಂದು ಮಾಹಿತಿ ನೀಡಿದರು.

ಕಳೆದ ಆಗಸ್ಟ್‌ನಲ್ಲಿ ನೆರೆ ಹಾವಳಿಯಿಂದ ಹಾನಿಗೊಳಗಾದ ರಸ್ತೆ ಮತ್ತು ಸೇತುವೆಗಳ ತುರ್ತು ದುರಸ್ತಿಗೆ ಅನುದಾನ ಲಭ್ಯವಿಲ್ಲದ್ದರಿಂದ ವಲಯಗಳಿಗೆ ಹಂಚಿಕೆ ಮಾಡಿದ್ದ ಅನುದಾನವನ್ನು ಹಿಂದಕ್ಕೆ ಪಡೆಯಲಾಗಿದೆ ಎಂಬ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರ ಮತ್ತೊಂದು ಪ್ರಶ್ನೆಗೆ ಡಿಸಿಎಂ ಉತ್ತರಿಸಿದರು. ಅನುದಾನ ಹಂಚಿಕೆಯಾದ ನಂತರ ಹಿಂಪಡೆಯಲಾದ ಅನುದಾನದ ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ABOUT THE AUTHOR

...view details