ಕರ್ನಾಟಕ

karnataka

ರಾಜ್ಯಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ: ಡಿಸಿಎಂ ಡಿ ಕೆ ಶಿವಕುಮಾರ್

ರಾಜ್ಯದಲ್ಲಿರುವ ಪಟಾಕಿ ಗೋದಾಮುಗಳಿಗೆ ಸುರಕ್ಷತೆ ಹಾಗೂ ಪರಿಶೀಲನೆ ಮಾಡಲು ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟಿಸ್​ ನೀಡಿ ಸೂಚನೆ ನೀಡಿರುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್​ ತಿಳಿಸಿದ್ದಾರೆ.

By ETV Bharat Karnataka Team

Published : Oct 8, 2023, 3:31 PM IST

Published : Oct 8, 2023, 3:31 PM IST

ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್

ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ‌ ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಸುರಕ್ಷತೆ ಹಾಗೂ ಪರಿಶೀಲನೆ ನಡೆಸುವಂತೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟಿಸ್​ ನೀಡಿ ಸೂಚನೆ ಕೊಟ್ಟಿರುವುದಾಗಿ ಹೇಳಿದ್ರು.

ತಮಿಳುನಾಡಿನ ಕಾರ್ಮಿಕರು ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಯುವಕರ ಸಾವು ದುಃಖಕರ ಸಂಗತಿ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದು, ತಮಿಳುನಾಡಿನವರು 3 ಲಕ್ಷ ಮೊತ್ತದ ಚೆಕ್ ಈಗಾಗಲೇ ವಿತರಣೆ ಮಾಡಿದ್ದಾರೆ. ಅವಘಡಕ್ಕೆ ಏನು ಕಾರಣ ಎಂದು ಶೀಘ್ರವೇ ತನಿಖೆ ನಡೆಸಲಾಗುವುದು ಎಂದರು.

ಒಳಗೆ ಹೋಗಲು ಆಗದ ಕಾರಣ ಕಟ್ಟಡದ ಹಿಂದಿನ ಗೋಡೆ ಒಡೆದು ಹಾಕುವಂತೆ ಸೂಚನೆ ನೀಡಿದ್ದೆ. ಇನ್ನು ಮುಂದೆ ಅಮಾಯಕರ ಸಾವು ಸಂಭವಿಸದಂತೆ ಮುನ್ನೆಚರಿಕೆ ವಹಿಸುತ್ತೇವೆ. ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಬೊಮ್ಮಾಯಿ ಅವರ ಹೇಳಿಕೆಯಂತೆ ನಡೆಯುತ್ತಿದ್ದೇವೆ :ಕ್ಷೇತ್ರಗಳಿಗೆ ಅನುದಾನದ ವಿಚಾರದಲ್ಲಿ ಕಾಂಗ್ರೆಸ್ ತಾರತಮ್ಯ ಮಾಡುತ್ತಿದ್ದು, ಬಿಜೆಪಿ ಈ ರೀತಿ ಮಾಡಿರಲಿಲ್ಲ ಎನ್ನುವ ಬೊಮ್ಮಾಯಿ ಅವರ ಆರೋಪಕ್ಕೆ "ಬೊಮ್ಮಾಯಿ ಅವರು ವಿಧಾನ ಪರಿಷತ್ತಿನಲ್ಲಿ ಏನು ಹೇಳಿಕೆ, ಉತ್ತರ ನೀಡಿದ್ದರೋ, ಅದನ್ನೇ ನಾವು ಪಾಲನೆ ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.

ಸೋಮವಾರ ಬ್ರಾಂಡ್ ಬೆಂಗಳೂರು ಸಭೆ :ಬ್ರಾಂಡ್ ಬೆಂಗಳೂರು ವಿಚಾರದಲ್ಲಿ 70,000 ಸಲಹೆಗಳು ಬಂದಿದ್ದು,‌ ಅವುಗಳನ್ನು ಒಂದು ಕಡೆ ಕ್ರೋಢಿಕರಿಸಿ ವಿಂಗಡಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಏಳು ತಂಡಗಳನ್ನು ಮಾಡಿದ್ದು, ಈ ತಂಡಗಳು ಉತ್ತಮ ಸಲಹೆಗಳನ್ನು ಆಯ್ಕೆ ಮಾಡುತ್ತದೆ. Voice of the citizens, should be voice of the Karnataka ಮಾತಿನಂತೆ ಜನಸಾಮಾನ್ಯರ ಮಾತುಗಳಿಗೆ ಮನ್ನಣೆ ನೀಡಲು ಸರ್ಕಾರ ಮುಂದಾಗಿದೆ. ಸೋಮವಾರ ಬೆಳಗ್ಗೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಭೆ ಸೇರಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಅತ್ತಿಬೆಲೆ ಪಟಾಕಿ ದುರಂತ: ಎಫ್​ಐಆರ್ ದಾಖಲು, ಅಂಗಡಿ ಮಾಲೀಕ - ಪುತ್ರನ ಬಂಧನ: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಮಾಲೀಕ ಮತ್ತು ಅವರ ಪುತ್ರನನ್ನು ಬಂಧಿಸಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.

ಡಿಜಿಪಿ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಪ್ರಕರಣ ಸಂಬಂಧ ಈಗಾಗಲೇ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಲೀಕ ಸೇರಿ ಐವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈಗಾಗಲೇ ಮಾಲೀಕ ಮತ್ತು ಅವರ ಮಗನನ್ನು ಬಂಧಿಸಿದ್ದು, ಇನ್ನುಳಿದ ಮೂವರನ್ನು ಶೀಘ್ರದಲ್ಲೇ ಬಂಧಿಸಲಿದ್ದೇವೆ" ಎಂದು ತಿಳಿಸಿದರು.

ಇದನ್ನೂ ಓದಿ:ಅತ್ತಿಬೆಲೆ ಪಟಾಕಿ ದುರಂತ: ಎಫ್​ಐಆರ್ ದಾಖಲು, ಅಂಗಡಿ ಮಾಲೀಕ - ಪುತ್ರನ ಬಂಧನ - ಡಿಜಿಪಿ ಅಲೋಕ್ ಮೋಹನ್‌ ಮಾಹಿತಿ

ABOUT THE AUTHOR

...view details