ಕರ್ನಾಟಕ

karnataka

ETV Bharat / state

ಗಡಿ ಕ್ಯಾತೆಯಿಂದ ಅವಲಕ್ಷಣ ಮಾಡಿಕೊಳ್ಳುತ್ತಿದ್ದಾರೆ: ಸಂಜಯ್ ರಾವತ್ ಗೆ ಡಿಸಿಎಂ ಅಶ್ವತ್ಥನಾರಾಯಣ ಟಾಂಗ್​ - ಶಿವಸೇನೆ ವಕ್ತಾರ ಸಂಜಯ್ ರಾವತ್

ಈಗಾಗಲೇ ಗಡಿಗಳು ನಿಗದಿಯಾಗಿದ್ದರೂ ತಿಳುವಳಿಕೆ ಇರುವಂತಹ ಶಿವಸೇನೆ ವಕ್ತಾರ ಸಂಜಯ್ ರಾವತ್ ಅನಗತ್ಯವಾಗಿ ಗಡಿಯಂತಹ ವಿಷಯ ಕೈಗೆತ್ತಿಕೊಂಡು ಅವರನ್ನು ಅವರೇ ಅವಲಕ್ಷಣ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಟಾಂಗ್ ನೀಡಿದ್ದಾರೆ.

sanjay-rawath-speak-about-dcm-ashwath-narayan
ಅಶ್ವತ್ಥನಾರಾಯಣ್

By

Published : Jan 19, 2020, 4:17 PM IST

ಬೆಂಗಳೂರು:ಈಗಾಗಲೇ ಗಡಿಗಳು ನಿಗದಿಯಾಗಿದ್ದರೂ ತಿಳುವಳಿಕೆ ಇರುವಂತಹ ಶಿವಸೇನೆ ವಕ್ತಾರ ಸಂಜಯ್ ರಾವತ್ ಅನಗತ್ಯವಾಗಿ ಗಡಿಯಂತಹ ಸೂಕ್ಷ್ಮ ವಿಷಯ ಕೈಗೆತ್ತಿಕೊಂಡು ಅವರನ್ನು ಅವರೇ ಅವಲಕ್ಷಣ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಟಾಂಗ್ ನೀಡಿದ್ದಾರೆ.

ಮಲ್ಲೇಶ್ವರಂನಲ್ಲಿ ಭಗವತ್‌ ಮಧ್ವಾಚಾರ್ಯರ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರವಾಗಿ ಪದೇ ಪದೇ ರಾಜಕೀಯ ಪ್ರೇರಿತ ಹೇಳಿಕೆ ನೀಡಿ ಜನರನ್ನು ಭಾವನಾತ್ಮಕವಾಗಿ ಕೆರಳಿಸುವ ಕೆಲಸವನ್ನು ಕೈಬಿಡಬೇಕು. ಈಗಾಗಲೇ ಒಂದು ನಿಗದಿತ ಗಡಿ ನಿಶ್ಚಯ ಆಗಿದೆ. ಈ ವಿಚಾರವನ್ನು ಮತ್ತೆ ಮತ್ತೆ ಪ್ರಸ್ತಾಪಿಸುವುದು ಅನಗತ್ಯ. ಇಂಥ ವಿಷಯ ಬಿಟ್ಟು, ಮಾಡಬೇಕಿರುವ ಉತ್ತಮ ಕಾರ್ಯಗಳನ್ನು ಕೈಗೆತ್ತಿಕೊಂಡರೆ ಒಳ್ಳೆಯದು ಎಂದರು.

ಸಂಜಯ್ ರಾವತ್ ಗೆ ಡಿಸಿಎಂ ಅಶ್ವತ್ಥನಾರಾಯಣ ತಿರುಗೇಟು

ಮಾನವೀಯತೆಗೆ, ಒಳ್ಳೆಯ ಕಾರ್ಯಗಳಿಗೆ ಗಡಿ ಇಲ್ಲ. ಕರ್ನಾಟಕ ಮತ್ತು ಮಹಾರಾಷ್ಟ್ರದ ಜನ ಸೌಹಾರ್ದತೆಯಿಂದ ಬಾಳುತ್ತಿದ್ದೇವೆ. ಅನಗತ್ಯ ವಿವಾದ ಎಳೆದು ತಂದು ಸಮಾಜದ ಶಾಂತಿ ಹಾಳುಗೆಡುವಬಾರದು. ಸಾಮಾಜಿಕ, ಆರ್ಥಿಕ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಎರಡು ರಾಜ್ಯಗಳು ಒಟ್ಟಿಗೆ ಕೆಲಸ ಮಾಡಬೇಕಿದೆ. ಪ್ರಗತಿಗೆ ಅಡ್ಡಿಯಾಗುವಂಥ ಕೆಲಸವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಶೀಘ್ರದಲ್ಲೇ ಸಂಪುಟ ವಿಸ್ತರಣೆ:

ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಯಡಿಯೂರಪ್ಪ ದಾವೋಸ್‌ಗೆ ಪ್ರಯಾಣ ಬೆಳೆಸಿದ್ದು, ಅಲ್ಲಿಂದ ವಾಪಸಾದ ನಂತರ ರಾಜ್ಯ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ಸಂಬಂಧ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆ ಶನಿವಾರ ಮಾತಕತೆ ನಡೆಸಿದ್ದು, ವಿದೇಶದಿಂದ ವಾಪಸಾಗುತ್ತಿದ್ದಂತೆ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚೆ ನಡೆಸಲಿದ್ದಾರೆ ಎಂದರು.

ಡಿಸಿಎಂ ಸ್ಥಾನ ವರಿಷ್ಠರ ನಿರ್ಧಾರ:
ಉಪಮುಖ್ಯಮಂತ್ರಿ ಸ್ಥಾನ ಕುರಿತು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ನಿರ್ಣಯ ಕೈಗೊಳ್ಳುತ್ತಾರೆ. ಪಕ್ಷ ಹಾಗೂ ಸರ್ಕಾರದ ಹಿತದೃಷ್ಟಿಯಿಂದ ವರಿಷ್ಠರು ಸೂಕ್ತ ನಿರ್ಣಯ ಕೈಗೊಳ್ಳುವರು ಎಂದರು.

ABOUT THE AUTHOR

...view details