ಬೆಂಗಳೂರು: ಪರಿಶಿಷ್ಟ ವರ್ಗಗಳ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಯು ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.
ಸುಗ್ರೀವಾಜ್ಞೆ ಪ್ರಕಾರ, ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15% ರಿಂದ ಶೇ.17% ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3% ರಿಂದ ಶೇ.7%ಕ್ಕೆ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ ನಿಧಿಗಳಿಂದ ಅನುದಾನ ಪಡೆಯುತ್ತಿರುವ ಯಾವುದೇ ಶಾಲೆ, ಕಾಲೇಜು ಅಥವಾ ಇತರೆ ಶೈಕ್ಷಣಿಕ ಸಂಸ್ಥೆಗಳಿಗೆ ಈ ಮೀಸಲಾತಿ ಹೆಚ್ಚಳ ಅನ್ವಯವಾಗಲಿದೆ.