ಕರ್ನಾಟಕ

karnataka

By

Published : Sep 16, 2019, 5:10 PM IST

ETV Bharat / state

ಅನ್ಯ ಉದ್ದೇಶಕ್ಕೆ ಎಸ್​ಸಿಪಿ‌ಟಿಎಸ್​ಪಿ ಅನುದಾನ‌ ಬಳಸಿದ್ರೆ ಹೋರಾಟ: ದಲಿತ ಸಂಘಟನೆಗಳ ಒಕ್ಕೂಟ

ಎಸ್​ಸಿಪಿ‌ಟಿಎಸ್​ಪಿ ಯೋಜನೆಯ ಅನುದಾನ ದಲಿತರ ಅಭಿವೃದ್ಧಿಗಾಗಿ ಮಾತ್ರ ಮೀಸಲಿರಬೇಕು. ಅದನ್ನು ಅನ್ಯ ಉದ್ದೇಶಕ್ಕೆ ಬಳಸಲು ಅವಕಾಶವಿಲ್ಲ. ಆದ್ರೆ ಈ ಅನುದಾನವನ್ನು ನೆರೆ ಪರಿಹಾರಕ್ಕೆ ಬಳಸಲು ಮುಂದಾಗಿರುವ ಸರ್ಕಾರ ಕೂಡಲೇ ಈ ನಿರ್ಧಾರ ಕೈಬಿಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕಟಸ್ವಾಮಿ ಆಗ್ರಹಿಸಿದ್ದಾರೆ.

ವೆಂಕಟಸ್ವಾಮಿ

ಬೆಂಗಳೂರು:ಸಮಾಜ ಕಲ್ಯಾಣ ಇಲಾಖೆಯ ಎಸ್​ಸಿಪಿ‌ಟಿಎಸ್​ಪಿ ಅನುದಾನವನ್ನು‌ ನೆರೆಪೀಡಿತ ಪ್ರದೇಶಗಳಲ್ಲಿ ದಲಿತರಿಗೆ ಮನೆಗಳನ್ನು ನಿರ್ಮಿಸಿಕೊಡಲು ಬಳಸುತ್ತೇವೆ ಎಂದಿರುವುದು ರಾಜ್ಯ ಸರ್ಕಾರದ ನಿರ್ಧಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕಟಸ್ವಾಮಿ

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಪರಿಷತ್ ಸಭೆ ವೇಳೆ ದಲಿತ ಸಂಘಟನೆಗಳ ಒಕ್ಕೂಟ ಪ್ರತಿನಿಧಿಗಳು ಎಸ್​ಸಿಪಿ‌ಟಿಎಸ್​ಪಿ ಅನುದಾನವನ್ನು ನೆರೆ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಕ್ಕೆ ಬಳಸದಂತೆ ಮನವಿ ಪತ್ರ ಸಲ್ಲಿಸಿದರು. ಸಿಎಂ ಯಡಿಯೂರಪ್ಪ, ಸಚಿವ ಗೋವಿಂದ ಕಾರಜೋಳಗೆ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸದಂತೆ ಆಗ್ರಹಿಸಿದರು.

ವಿಧಾನಸೌಧದಲ್ಲಿ ಡಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್​ ಬೊಮ್ಮಾಯಿ, ಸಚಿವ ಜೆ.ಸಿ ಮಾಧುಸ್ವಾಮಿ, ಶಾಸಕರಾದ ಎನ್. ಮಹೇಶ್, ರಾಜುಗೌಡ ಸೇರಿ ಹಲವರು ಭಾಗಿಯಾಗಿದ್ದು, ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದಿನ ಸಭೆಯಲ್ಲಿ ಎಸ್​ಸಿಪಿ‌ಟಿಎಸ್​ಪಿ ಯೋಜನೆಯ ಅನುದಾನವನ್ನು ನೆರೆ ಪೀಡಿತ ಪ್ರದೇಶಗಳಲ್ಲಿರುವ ಪರಿಶಿಷ್ಟರ ಪುನರ್ವಸತಿಗೆ ಬಳಸುವಂತೆ ಸೂಚನೆ ನೀಡಲಾಗಿದೆ. ಅದೇ ರೀತಿ ನಗರಾಭಿವೃದ್ಧಿ ಇಲಾಖೆಯು ಎಸ್​ಸಿಪಿ‌ಟಿಎಸ್​ಪಿ ಯೋಜನೆಯ ಅನುದಾನದಲ್ಲಿ ನೆರೆ ಪೀಡಿತ ಪ್ರದೇಶಗಳಲ್ಲಿ ಶೇ. 50 ರಷ್ಟು ಅನುದಾನವನ್ನು ಮನೆ ನಿರ್ಮಾಣ ಹಾಗೂ ಉಳಿದ ಅನುದಾನವನ್ನು ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಬಳಸಲು ನಿರ್ಧರಿಸಲಾಗಿದೆ.

ಎಸ್​ಸಿಪಿ‌ಟಿಎಸ್​ಪಿ ವಿಶೇಷ ಅನುದಾನದಲ್ಲಿ ನೆರೆ ಪೀಡಿತರಿಗೆ ಮನೆ ನಿರ್ಮಾಣ: ಸಿಎಂ

ಎಸ್​ಸಿಪಿ‌ಟಿಎಸ್​ಪಿ ಯೋಜನೆಯ ಅನುದಾನವನ್ನು ದಲಿತರ ಅಭಿವೃದ್ಧಿಗಾಗಿ ಮಾತ್ರ ಮೀಸಲಿರುವ ಹಣವಾಗಿದೆ. ಅನ್ಯ ಉದ್ದೇಶಕ್ಕೆ ಬಳಸಲು ಅವಕಾಶವಿಲ್ಲ. ಹೀಗಾಗಿ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು.‌ ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕಟಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಸಿಎಂ ಯಡಿಯೂಪ್ಪ ಸಭೆಯಲ್ಲಿ ಎಸ್​ಸಿಪಿ‌ಟಿಎಸ್​ಪಿ ಅನುದಾನ ನೆರೆ ಪೀಡಿತ ದಲಿತ ಕಾಲೋನಿಗಳ ಅಭಿವೃದ್ಧಿಗೆ ಬಳಸಲಾಗುವುದು ಎಂದು ತಿಳಿಸಿದ್ದರೂ ದಲಿತ ಸಂಘಟನೆ ಈ ಎಚ್ಚರಿಕೆಯನ್ನು ನೀಡಿದೆ.

ABOUT THE AUTHOR

...view details