ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಿಗದಿ ಮಾಡಿದ ಬೆನ್ನಲ್ಲೇ ಹಂಗಾಮಿ ಸಭಾಪತಿಗೆ ಹೈಕಮಾಂಡ್ ಬುಲಾವ್ ನೀಡಿದೆ. ವರಿಷ್ಠರ ಸೂಚನೆಯಂತೆ ರಘುನಾಥರಾವ್ ಮಲ್ಕಾಪುರೆ ದೆಹಲಿಗೆ ಪ್ರಯಾಣಿಸಿದ್ದಾರೆ. ಸಭಾಪತಿ ಸ್ಥಾನಕ್ಕಾಗಿ ಹೊರಟ್ಟಿ ಪಟ್ಟು ಹಿಡಿದಿದ್ದಾರೆ. ಈ ಕುರಿತು ಹಂಗಾಮಿ ಸಭಾಪತಿ ಜೊತೆ ಮಹತ್ವದ ಮಾತುಕತೆ ನಡೆಸಿ ಮನವೊಲಿಕೆ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿದೆ.
ಸಭಾಪತಿ ಚುನಾವಣೆ ನಿಗದಿ: ದೆಹಲಿಗೆ ಬರುವಂತೆ ಕೇಂದ್ರ ನಾಯಕರ ಸೂಚನೆ ಹಿನ್ನೆಲೆಯಲ್ಲಿ ಹಂಗಾಮಿ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.ಇಂದು ರಾತ್ರಿಯೇ ದೆಹಲಿಯಲ್ಲಿ ವರಿಷ್ಠ ನಾಯಕರ ಜೊತೆಗೆ ಮಲ್ಕಾಪುರೆ ಚರ್ಚೆ ನಡೆಸಲಿದ್ದಾರೆ. ನವೆಂಬರ್ 19 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಡಿಸೆಂಬರ್ 21 ಕ್ಕೆ ಸಭಾಪತಿ ಚುನಾವಣೆ ನಿಗದಿ ಮಾಡಲಾಗಿದೆ. ಬಿಜೆಪಿ ನಾಯಕರ ಸೂಚನೆ ಮೇರೆಗೆ ಚುನಾವಣಾ ವೇಳಾಪಟ್ಟಿಯನ್ನು ಸರ್ಕಾರ ಪ್ರಕಟಿಸಿದ್ದು, ಇದಕ್ಕೆ ಮಲ್ಕಾಪುರೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗ್ತಿದೆ.
ಬದಲಾವಣೆಗೆ ನಾಯಕರ ತೀವ್ರ ವಿರೋಧ:ಹಂಗಾಮಿ ಸಭಾಪತಿ ಮಲ್ಕಾಪುರೆ ಬದಲಾವಣೆಗೆ ಕುರುಬ ಸಮುದಾಯದ ನಾಯಕರ ತೀವ್ರ ವಿರೋಧ ವ್ಯಕ್ತವಾಗಿದೆ. ಬಹಿರಂವಾಗಿಯೇ ಮಲ್ಕಾಪುರೆ ಬದಲಾವಣೆ ಮಾಡದಂತೆ ಆಗ್ರಹಿಸಿದ್ದಾರೆ. ಚುನಾವಣೆ ಸನಿಹದಲ್ಲಿ ಯಾವುದೇ ಸಮುದಾಯದ ಅಸಮಾಧಾನ ಕಟ್ಟಿಕೊಳ್ಳಲು ಸಿದ್ಧರಿಲ್ಲದ ಬಿಜೆಪಿ ವರುಷ್ಠರು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ. ಕುರುಬ ಮತ್ತು ಮೂಲ ಬಿಜೆಪಿ ನಾಯಕರ ಬೇಸರವನ್ನೂ ಪರಿಗಣಿಸಿ ಮನವೊಲಿಕೆ ಕಾರ್ಯ ನಡೆಸಲಿದ್ದಾರೆ.