ಕರ್ನಾಟಕ

karnataka

ETV Bharat / state

ಗಡ್ಕರಿ ಭೇಟಿಯಾದ ಶೋಭಾ ಕರಂದ್ಲಾಜೆ: ಉಡುಪಿ-ಚಿಕ್ಕಮಗಳೂರು ರಸ್ತೆ ಅಭಿವೃದ್ಧಿಗೆ ಮನವಿ

ಉಡುಪಿ-ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಸಲ್ಲಿಸಿದ್ದಾರೆ.

By

Published : Jul 2, 2019, 12:55 PM IST

ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು/ದೆಹಲಿ: ಉಡುಪಿ-ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ಮಾಡಿದರು. ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಕೆಲವು ರಸ್ತೆಗಳ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.

ಬೇಡಿಕೆಗಳು:

1. ಕರಾವಳಿ ಬೈಪಾಸ್-ಮಲ್ಪೆ ರಸ್ತೆ ಅಗಲೀಕರಣ

2.ಪರ್ಕಳದಿಂದ-ತೀರ್ಥಹಳ್ಳಿಯ ವರೆಗೆ NH ಅಭಿವೃದ್ಧಿ
3.ಬೇಲೂರು-ಚಿಕ್ಕಮಗಳೂರು ರಸ್ತೆ ಅಭಿವೃದ್ಧಿ
4.ಶೃಂಗೇರಿ-ಬಾಳೆಹೊನ್ನೂರು-ಅಲ್ದೂರು-ನಾಡಿಪುರ ರಸ್ತೆ ಅಭಿವೃದ್ಧಿ.
5. ತೀರ್ಥಹಳ್ಳಿಯಿಂದ- ನಿಮ್ಮಾರದವರೆಗೆ ರಸ್ತೆ ಅಭಿವೃದ್ಧಿ.
6.ಬೇಲೂರು-ಚಿಕ್ಕಮಗಳೂರು (ಮೂಡಿಗೆರೆ-ಕಡೂರು ರಸ್ತೆ) ನಗರಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ

ಈ ಎಲ್ಲಾ ಬೇಡಿಕೆಗಳ ಜೊತೆಗೆ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಇನ್ನಿತರ ಸಮಸ್ಯೆಗಳ ಕುರಿತು ಕೇಂದ್ರ ಸಚಿವರ ಗಮನಕ್ಕೆ ತಂದು, ರಾಷ್ಟ್ರೀಯ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ABOUT THE AUTHOR

...view details