ಕರ್ನಾಟಕ

karnataka

ETV Bharat / state

ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ: ಈಶ್ವರಪ್ಪ ನಡೆಗೆ ಅರುಣ್ ಸಿಂಗ್ ಅಸಮಾಧಾನ - BJP In Charge Arun Singh

ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ವಜುಭಾಯ್ ವಾಲಾ ಸೇರಿ ಬಿಜೆಪಿ ಹೈಕಮಾಂಡ್​ಗೆ ಪತ್ರದ ಮೂಲಕ ದೂರು ನೀಡಿದ್ದರು. ಸಚಿವ ಕೆ.ಎಸ್. ಈಶ್ವರಪ್ಪ ನಡೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಕ್ಷೇಪಿಸಿದ್ದಾರೆ.

BJP In Charge Arun Singh
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

By

Published : Apr 1, 2021, 12:51 PM IST

Updated : Apr 1, 2021, 1:22 PM IST

ಬೆಂಗಳೂರು:ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳನ್ನು ಸಂಬಂಧಪಟ್ಟ ವೇದಿಕೆಗಳಲ್ಲಿ ಚರ್ಚಿಸಿ ಪರಿಹಾರ ಪರಿಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಈ ರೀತಿ ರಾಜ್ಯಪಾಲರಿಗೆ ಪತ್ರ ಬರೆಯುವುದು ಸರಿಯಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ನಡೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಕ್ಷೇಪಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಈ ರೀತಿ ಏಕಾಏಕಿ ರಾಜ್ಯಪಾಲರಿಗೆ ಪತ್ರ ಬರೆದಿರುವುದು ಸರಿಯಲ್ಲ. ಪಕ್ಷದ ನಾಯಕರ ಗಮನಕ್ಕೆ ತರಬೇಕಿತ್ತು. ಇಲ್ಲವೇ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಬಹುದಿತ್ತು. ಸಚಿವ ಸಂಪುಟದಲ್ಲಿಯೂ ಇದರ ಬಗ್ಗೆ ಪ್ರಸ್ತಾಪ ಮಾಡುವ ಅವಕಾಶವಿತ್ತು. ಆದರೆ, ಇದೆಲ್ಲವನ್ನೂ ಬಿಟ್ಟು ಪತ್ರದ ಮೂಲಕ ಹೈಕಮಾಂಡ್ ನಾಯಕರು ಮತ್ತು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ನಾಯಕರಿಗೆ ಪತ್ರದ ಮೂಲಕ ಮಾಹಿತಿ ನೀಡುವುದು ಒಪ್ಪ ಬಹುದಾದರೂ, ಸಂಪುಟ ಸದಸ್ಯರಾಗಿ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು ಸರಿಯಲ್ಲ ಎಂದರು.

ಸದ್ಯ ಪಂಚರಾಜ್ಯಗಳ ಚುನಾವಣೆ ಕರ್ನಾಟಕದ ಉಪಚುನಾವಣೆ ಮೇಲೆ ಹೈಕಮಾಂಡ್ ಗಮನ ಹರಿಸಿದ್ದು, ಚುನಾವಣಾ ಪ್ರಕ್ರಿಯೆ ಮುಗಿದ ನಂತರವಷ್ಟೇ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಶೇಷ ತನಿಖಾ ತಂಡ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ. ಯುವತಿ ಕೂಡ ಹೇಳಿಕೆ‌ ದಾಖಲಿಸಿದ್ದಾರೆ. ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಯಲಿದ್ದು, ಪೂರ್ಣ ತನಿಖೆ ನಂತರವಷ್ಟೇ ಸತ್ಯ ಹೊರಬರಲಿದೆ. ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಪಾತ್ರ ಇದೆ ಎನ್ನಲಾಗುತ್ತಿದ್ದು, ಇದರ ಪರಿಣಾಮ ಉಪಚುನಾವಣೆಯಲ್ಲಿ ಸ್ಪಷ್ಟವಾಗಲಿದೆ. ಕಾಂಗ್ರೆಸ್​​ಗೆ ಸೋಲಾಗಲಿದೆ ಎಂದು ಭವಿಷ್ಯ ನುಡಿದರು.

ಓದಿ:ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಆರೋಪ: ಬಿಎಸ್​ವೈ ವಿರುದ್ಧ ಪ್ರಧಾನಿ ಮೋದಿ, ಗವರ್ನರ್​ಗೆ ಈಶ್ವರಪ್ಪ ಪತ್ರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ವಜುಭಾಯ್ ವಾಲಾ ಸೇರಿ ಬಿಜೆಪಿ ಹೈಕಮಾಂಡ್​ಗೆ ಪತ್ರದ ಮೂಲಕ ದೂರು ನೀಡಿದ್ದರು.

Last Updated : Apr 1, 2021, 1:22 PM IST

ABOUT THE AUTHOR

...view details