ಕರ್ನಾಟಕ

karnataka

By

Published : Aug 17, 2019, 11:27 AM IST

ETV Bharat / state

ಯಾವ ಪ್ರಧಾನಿಯೂ ರಾಜ್ಯವನ್ನು ನಿರ್ಲಕ್ಷಿಸಿಲ್ಲ : ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಯಾವ ಕೇಂದ್ರ ಸರ್ಕಾರವಾಗಲಿ, ಪ್ರಧಾನಿಯಾಗಲಿ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

: ಸಿದ್ದರಾಮಯ್ಯ

ಬೆಂಗಳೂರು : ಪ್ರವಾಹದಿಂದ ತತ್ತರಿಸಿದ ಹೋದ ಕರ್ನಾಟಕಕ್ಕೆ ಪರಿಹಾರ ಕೊಡುವ ವಿಚಾರವಾಗಿ ಪ್ರಧಾನಿ ಮೋದಿ ನಡೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ ವಾಜಪೇಯಿ ಸರ್ಕಾರ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವಾಗಲಿ, ಪ್ರಧಾನಿಯಾಗಲಿ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ನರೇಂದ್ರ ಮೋದಿ ಅವರಿಗೆ ಟ್ವೀಟ್​ ಮೂಲಕ ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details