ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಪ್ರತಿಯೊಂದು ಘೋಷಣೆ ಚುನಾವಣೆ ಗೆಲ್ಲುವ ಗಿಮಿಕ್ ಆಗಿರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ಘೋಷಣೆಗಳು ಚುನಾವಣೆ ಗಿಮಿಕ್: ಬಿಜೆಪಿಗರನ್ನು ಚರ್ಚೆಗೆ ಆಹ್ವಾನಿಸಿದ ಸಿದ್ದರಾಮಯ್ಯ - ಸಿದ್ದರಾಮಯ್ಯ ಟ್ವೀಟ್ ಸುದ್ದಿ
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಪ್ರತಿಯೊಂದು ಘೋಷಣೆಯನ್ನು ಚುನಾವಣೆ ಗೆಲ್ಲುವ ಗಿಮಿಕ್ ಆಗಿರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮಹಾರಾಷ್ಟ್ರ ಚುನಾವಣೆ ಮುಗಿದಿದ್ದು, ನೆರೆ ಪರಿಹಾರ, ನಿರುದ್ಯೋಗ ಸಮಸ್ಯೆ ಬಗ್ಗೆ ಚರ್ಚಿಸೋಣವೆಂದು ಬಿಜೆಪಿ ನಾಯಕರನ್ನು ಟ್ವೀಟ್ ಮೂಲಕವೇ ಆಹ್ವಾನಿಸಿದ್ದಾರೆ.

ಸಿದ್ದರಾಮಯ್ಯ ಲೇವಡಿ
ಸನ್ಮಾನ್ಯ ಬಿಜೆಪಿ ನಾಯಕರೇ, ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ಲಾ. ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ. ಈಗ ತುರ್ತಾಗಿ ನಿರುದ್ಯೋಗ, ಬೆಲೆ ಏರಿಕೆ, ದಿವಾಳಿಯಾಗುತ್ತಿರುವ ಬ್ಯಾಂಕ್ಗಳು, ರೈತರ ಕಷ್ಟಗಳು, ನೆರೆ-ಬರದ ಬಗ್ಗೆ ಚರ್ಚೆ ಮಾಡೋಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.