ಕರ್ನಾಟಕ

karnataka

ETV Bharat / state

ಎನ್​ಡಿಪಿಎಸ್​ ಕಾಯ್ದೆ; ಕಳೆದ 10 ವರ್ಷಗಳಲ್ಲಿ ಕೈಗೊಂಡ ಕ್ರಮದ ಮಾಹಿತಿ ಕೇಳಿದ ಸಿದ್ದರಾಮಯ್ಯ - Legal action

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಒಟ್ಟು ಎಂಟು ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಕೇಳಿದ್ದಾರೆ.

Siddaramaiah wrote a letter to the Home Minister
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

By

Published : Sep 5, 2020, 11:49 PM IST

ಬೆಂಗಳೂರು : ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಳೆದ 10 ವರ್ಷಗಳಿಂದ ತೆಗೆದುಕೊಂಡ ಕಾನೂನು ಕ್ರಮಗಳ ಕುರಿತು ಅತ್ಯಂತ ಜರೂರಾಗಿ ಮಾಹಿತಿ ನೀಡಲು ಗೃಹ ಸಚಿವರಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೋರಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ

ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಈ ಸಂಬಂಧ ಪತ್ರ ಬರೆದಿರುವ ಅವರು ಒಟ್ಟು ಎಂಟು ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಕೇಳಿದ್ದಾರೆ.

  1. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಳೆದ 10 ವರ್ಷಗಳಿಂದ ಎಷ್ಟು ಜನರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ. ದಾಖಲಿಸಿದ ಪ್ರಕರಣಗಳು ನ್ಯಾಯಾಲಯಗಳಲ್ಲಿ ಯಾವ ಸ್ಥಿತಿಯಲ್ಲಿವೆ? ನ್ಯಾಯಾಲಯಗಳಲ್ಲಿ ಖುಲಾಸೆಯಾದ ಪ್ರಕರಣಗಳೆಷ್ಟು? ಪ್ರಕರಣವಾರು, ಜಿಲ್ಲಾವಾರು ಮಾಹಿತಿ ನೀಡುವುದು.
  2. ಶಿಕ್ಷೆಯಾಗಿದ್ದರೆ, ಎಷ್ಟು ಜನರಿಗೆ ಶಿಕ್ಷೆಯಾಗಿದೆ? ವ್ಯಕ್ತಿವಾರು, ಶಿಕ್ಷೆಯ ಪ್ರಮಾಣವಾರು, ಜಿಲ್ಲಾವಾರು ಮಾಹಿತಿ ನೀಡುವುದು.
  3. ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಹಕಾರವಿಲ್ಲದೆ ಗಾಂಜಾ ದಂಧೆ ಇಷ್ಟು ನಿರಾತಂಕವಾಗಿ ನಡೆಯಲು ಸಾಧ್ಯವೇ? ಸಾಧ್ಯವಿಲ್ಲವಾದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮೇಲೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ? ಎಷ್ಟು ಜನರನ್ನು ಅಮಾನತು ಮಾಡಲಾಗಿದೆ? ಎಷ್ಟು ಜನರಿಗೆ ಶಿಕ್ಷೆ ವಿಧಿಸಲಾಗಿದೆ? ಜಿಲ್ಲಾವಾರು ವಿವರ ನೀಡುವುದು.
  4. ಎನ್.ಡಿ.ಪಿ.ಎಸ್. ಕಾಯ್ದೆ ಪ್ರಕಾರ ವಿವಿಧ ಹಂತದ ಸಮಿತಿಗಳನ್ನು ರಚಿಸಬೇಕು, ಜಿಲ್ಲೆ ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ? ಅವುಗಳು ಇದುವರೆವಿಗೆ ಏನು ಕ್ರಮಗಳನ್ನು ಕೈಗೊಂಡಿವೆ? ಎಷ್ಟು ಸಭೆಗಳನ್ನು ನಡೆಸಿವೆ ಎಂಬ ವಿವರಗಳನ್ನು ನೀಡುವುದು.
  5. ಡ್ರಗ್ಸ್ ದುಶ್ಚಟಕ್ಕೆ ಸಿಲುಕಿದ ಮಕ್ಕಳ ತಂದೆ-ತಾಯಿಗಳಿಂದ ಗುಪ್ತವಾಗಿ ಮಾಹಿತಿ ಪಡೆಯುವ ವ್ಯವಸ್ಥೆ ರಾಜ್ಯದಲ್ಲಿದೆಯೇ? ಒಟ್ಟು ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ? ಅವುಗಳ ಕುರಿತು ಈವರೆಗೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ?
  6. ಡ್ರಗ್ಸ್ ಎಂದು ಕರೆಯುವ ಈ ವಸ್ತುಗಳು ಎಲ್ಲಿಂದ ಸರಬರಾಜಾಗುತ್ತಿದೆ? ರಾಜ್ಯದ ಎಲ್ಲೆಲ್ಲಿಗೆ ಸರಬರಾಜಾಗುತ್ತಿದೆ? ಸರಬರಾಜುದಾರರ ಒಟ್ಟು ಆಸ್ತಿಗಳನ್ನು, ಇದುವರೆಗೆ ಮುಟ್ಟುಗೋಲು ಹಾಕಲಾಗಿದೆ? ಜಿಲ್ಲಾವಾರು ಮಾಹಿತಿ ನೀಡುವುದು.
  7. ಡ್ರಗ್ ವ್ಯಸನಕ್ಕೆ ಸಿಕ್ಕಿಕೊಂಡವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದ್ದೀರಿ? ಅವರಲ್ಲಿ ಎಷ್ಟು ಜನ ಸಂಪೂರ್ಣವಾಗಿ ವ್ಯಸನದಿಂದ ಮುಕ್ತರಾಗಿದ್ದಾರೆ? ಎಷ್ಟು ಜನ ಮತ್ತೆ ಅದೇ ವ್ಯಸನಕ್ಕೆ ಬಲಿಯಾಗಿದ್ದಾರೆ?
  8. ಡ್ರಗ್ಸ್ ವ್ಯಸನದಿಂದಾಗಿ ಮರಣ ಹೊಂದಿದ ವ್ಯಕ್ತಿಗಳೆಷ್ಟು? ಈ ವಿವರಗಳನ್ನು ಜಿಲ್ಲಾವಾರು ನೀಡುವುದು.

ಈ ಮೇಲಿನ ಪ್ರಶ್ನೆಗಳಿಗೆ ಅತ್ಯಂತ ತ್ವರಿತವಾಗಿ ಉತ್ತರ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ

ABOUT THE AUTHOR

...view details