ಬೆಂಗಳೂರು/ಮೈಸೂರು: ಮೈಸೂರಿನಲ್ಲಿ ಬಹಿರಂಗವಾಗಿ ಪರಸ್ಪರ ಜಟಾಪಟಿಗೆ ಇಳಿದಿದ್ದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇಬ್ಬರು ಐಎಎಸ್ ಅಧಿಕಾರಿಗಳಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಕಿತ್ತಾಟ ಭಾರೀ ಸುದ್ದಿಗೆ ಗ್ರಾಸವಾಗಿತ್ತು. ಇಬ್ಬರು ಅಧಿಕಾರಿಗಳು ಮಾಧ್ಯಮಗಳ ಮೂಲಕ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗುವ ಮೂಲಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಇದೀಗ ಸರ್ಕಾರ ಮಧ್ಯ ಪ್ರವೇಶಿಸಿದ್ದು, ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಧಾರ್ಮಿಕ ಹಾಗೂ ದತ್ತಿ ಇಲಾಖೆ ಸಿಂಧೂರಿ ವರ್ಗಾವಣೆ:
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ಹಿಂದು ಧಾರ್ಮಿಕ ಹಾಗೂ ದತ್ತಿ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.