ಬೆಂಗಳೂರು :ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಬಳಿಕ ಮಾಜಿ ಸಚಿವ ಡಿ.ಸುಧಾಕರ್ ಹೆಸರು ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ವಿಚಾರಣೆಗೊಳಪಡಿಸಲು ಎಸ್ಐಟಿ ತನಿಖಾಧಿಕಾರಿಗಳು ನಿರ್ಧರಿಸಿದ್ದಾರೆ. ನಾಳೆ ಆಡುಗೋಡಿಯ ತಾಂತ್ರಿಕ ಕೇಂದ್ರಕ್ಕೆ ಬರುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಯುವತಿ ಕಾಲ್ಲಿಸ್ಟ್ನಲ್ಲಿ ಮಾಜಿ ಸಚಿವ ಡಿ.ಸುಧಾಕರ್ ಜತೆ ಮಾತನಾಡಿದ ಬಗ್ಗೆ, ಕಳೆದ ವರ್ಷ ಆಗಸ್ಟ್ನಿಂದ ನವೆಂಬರ್ವರೆಗೂ ಸಂಪರ್ಕದಲ್ಲಿದ್ದರು ಎಂಬ ಕುರಿತು ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.