ಕರ್ನಾಟಕ

karnataka

ETV Bharat / state

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್,ಜಮೀರ್‌ಗೆ ಎಸ್​ಐಟಿ ನೋಟಿಸ್​ - undefined

ಬಹುಕೋಟಿ ವಂಚನೆ ಪ್ರಕರಣದಲ್ಲಿ ಶಿವಾಜಿನಗರ ಶಾಸಕ ರೋಷನ್​ ಬೇಗ್​ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್​ ಅಹಮ್ಮದ್​ ಖಾನ್‌ಗೆ ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್​ ಜಾರಿ ಮಾಡಿದೆ.

ಎಸ್​ಐಟಿ ನೋಟಿಸ್​

By

Published : Jul 24, 2019, 11:31 PM IST

ಬೆಂಗಳೂರು : ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತ ಆರೋಪಿ ಐಎಂಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್​ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಇದೇ ವೇಳೆ ಎಸ್​ಐಟಿ ಅಧಿಕಾರಿಗಳು ಇಬ್ಬರೂ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದ್ದಾರೆ.

ಶಿವಾಜಿನಗರ ಶಾಸಕ ರೋಷನ್​ ಬೇಗ್​ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್​ ಅಹಮ್ಮದ್​ ಖಾನ್ ಇದೇ ತಿಂಗಳು 29 ರಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ತನಿಖಾಧಿಕಾರಿ ಗಿರೀಶ್​ ನೋಟಿಸ್​ ಜಾರಿ ಮಾಡಿದ್ದಾರೆ. ಐಎಂಎ ವಂಚನೆ ಪ್ರಕರಣದಲ್ಲಿ ಮನ್ಸೂರ್​ ಜೊತೆ ಹಣದ ಅವ್ಯವಹಾರ ನಡೆದಿದೆ ಎಂಬ ಆರೋಪದ ಆಧಾರದ ಮೇಲೆ ಇಡಿ ಅಧಿಕಾರಿಗಳು ಜು.5 ರಂದು ಜಮೀರ್​ ವಿಚಾರಣೆ ಮಾಡಿದ್ದರು.

ಬಳಿಕ ರೋಷನ್​ ಬೇಗ್​ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ತೆರಳುವ ವೇಳೆ ಎಸ್ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೇ ಮೊದಲ ಬಾರಿಗೆ ಇಬ್ಬರು ಶಾಸಕರಿಗೆ ನೋಟಿಸ್​ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

For All Latest Updates

TAGGED:

ABOUT THE AUTHOR

...view details