ಕರ್ನಾಟಕ

karnataka

ETV Bharat / state

ನನಗೆ 90 ವರ್ಷ ಆಯ್ತು ವಿಶ್ರಾಂತಿ ಬೇಕು: ಮಾಜಿ ಸಿಎಂ ಎಸ್ ಎಂ ಕೃಷ್ಣ - ಚಿತ್ರಕಲಾ ಪರಿಷತ್​​ನಲ್ಲಿ ಇಂಡಿಯನ್ ಆರ್ಟ್ ಫೆಸ್ಟಿವಲ್​ಗೆ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರಿಂದ ಚಾಲನೆ

ಈಗಿನ ರಾಜಕೀಯದಲ್ಲಿ ಆಗ್ತಿರುವ ಬೆಳವಣಿಗೆ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ ಎಸ್​ ಎಂ ಕೃಷ್ಣ, ನನಗೆ 90 ವರ್ಷ ಆಯ್ತು, ಸದ್ಯಕ್ಕೆ ವಿಶ್ರಾಂತಿ ಬೇಕು ಎಂದು ಹೇಳಿದರು.

ನಂಗೆ 90 ವರ್ಷ ಆಯ್ತು ವಿಶ್ರಾಂತಿ ಬೇಕು ಎಂದ  ಮಾಜಿ ಸಿಎಂ ಎಸ್ ಎಂ ಕೃಷ್ಣಾ
ನಂಗೆ 90 ವರ್ಷ ಆಯ್ತು ವಿಶ್ರಾಂತಿ ಬೇಕು ಎಂದ ಮಾಜಿ ಸಿಎಂ ಎಸ್ ಎಂ ಕೃಷ್ಣಾ

By

Published : May 5, 2022, 6:58 PM IST

Updated : May 5, 2022, 7:48 PM IST

ಬೆಂಗಳೂರು: ಚಿತ್ರಕಲಾ ಪರಿಷತ್​​ನಲ್ಲಿ ಇಂಡಿಯನ್ ಆರ್ಟ್ ಫೆಸ್ಟಿವಲ್ ಇಂದಿನಿಂದ ಶುರುವಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಚಾಲನೆ ಕೊಟ್ಟರು. ಬಳಿಕ ಮಾತಾನಾಡಿದ ಅವರು, ಕಲಾಕೃತಿಗಳು ಕಣ್ಣಿಗೆ ಹಾಗೂ ಮನಸ್ಸಿಗೆ ನೆಮ್ಮದಿ, ಸಂತೋಷ ಕೊಡುತ್ತವೆ. ನಮ್ಮ ದೇಶದ ಪ್ರಸಿದ್ಧ ಕಲಾವಿದರು, ಹೆಸರು ಮಾಡಿರುವ ಕಲಾವಿದರು ಬಂದಿದ್ದು, ಅವರ ಕಲಾಕೃತಿಗಳ ಪ್ರದರ್ಶನ ನಡೆಯುತ್ತಿದೆ. ಈ ಕಲಾಕೃತಿಗಳನ್ನು ನೋಡಲು ಸಂತೋಷವಾಗ್ತಿದೆ ಎಂದರು.

ಈಗಿನ ರಾಜಕೀಯದಲ್ಲಿ ಆಗ್ತಿರುವ ಬೆಳವಣಿಗೆ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗೆ 90 ವರ್ಷ ಆಯ್ತು, ಸದ್ಯಕ್ಕೆ ವಿಶ್ರಾಂತಿ ಬೇಕು ಎಂದರು. ಈ ಭಾರತ ಕಲಾ ಉತ್ಸವದಲ್ಲಿ ದೇಶದ ಪ್ರತಿಷ್ಠಿತ 25 ಕಲಾ ಗ್ಯಾಲರಿಗಳು ಮತ್ತು 100ಕ್ಕೂ ಅಧಿಕ ಖ್ಯಾತ ಕಲಾವಿದರು ಹಾಗೂ 300 ಉತ್ಸಾಹಿ ಮತ್ತು ಯುವ ಕಲಾವಿದರು ಭಾಗವಹಿಸಿದ್ದಾರೆ.

ನನಗೆ 90 ವರ್ಷ ಆಯ್ತು ವಿಶ್ರಾಂತಿ ಬೇಕು: ಮಾಜಿ ಸಿಎಂ ಎಸ್ ಎಂ ಕೃಷ್ಣ

2011ರಿಂದಲೇ ಭಾರತ ಕಲಾ ಉತ್ಸವವನ್ನು ಪ್ರಾರಂಭಿಸಲಾಯಿತು. ಈ ಕಲಾ ಉತ್ಸವದ ರೂವಾರಿ ಮುಂಬೈನ ರಾಜೇಂದ್ರ ಪಾಟೀಲ್, ಆರಂಭದಲ್ಲಿ ದೆಹಲಿ ಹಾಗೂ ಮುಂಬೈ ಕಲಾವಿದರು ಕ್ರಮವಾಗಿ ಆಯೋಜಿಸಿಕೊಂಡು ಬಂದಿದ್ದಾರೆ. ಈ ಸಲ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಉತ್ಸವದ ಮೂಲ ಉದ್ದೇಶ, ಸಮಕಾಲೀನ ಕಲಾವಿದರನ್ನು ಮತ್ತು ಕಲಾಕೃತಿಗಳನ್ನು ಒಂದೇ ಸೂರಿನಡಿ ತರುವುದು ಹಾಗೂ ಪ್ರದರ್ಶಿಸುವುದಾಗಿದೆ.

ಇದನ್ನೂ ಓದಿ: ಬುರ್ಖಾ ಧರಿಸದ ಮುಸ್ಲಿಂ ಯುವತಿಯರಿಗೆ ಎಂಡಿಎಫ್ ಬೆದರಿಕೆ: ಪೊಲೀಸರಿಂದ ತನಿಖೆ

Last Updated : May 5, 2022, 7:48 PM IST

For All Latest Updates

TAGGED:

ABOUT THE AUTHOR

...view details