ಬೆಂಗಳೂರು: ಶಾಲಾ ಕಾಲೇಜ್ಗಳಲ್ಲಿ ವಿದ್ಯಾರ್ಥಿಗಳಿಗೆ ಅಂಕ ತೆಗೆಯುವುದನ್ನೇ ಸಾಧನೆ ಎಂದು ಹೇಳಿ ಕೊಡಲಾಗ್ತಿದೆ. ಆದರೆ, ವಿದ್ಯಾಭ್ಯಾಸದ ಬಳಿಕ ಉದ್ಯೋಗ ಪಡೆದುಕೊಳ್ಳಬೇಕಾದ ಸಮಾಜ ಎದುರಿಸಬೇಕಾದ ಸಾಮಾಜಿಕ ಕೌಶಲ್ಯವನ್ನೂ ಕಲಿಸಬೇಕು ಎಂದು ಬೆಂಗಳೂರು ಬಂಟರ ಸಂಘ ಏರ್ಪಡಿಸಿದ್ದ ಸಂಪರ್ಕ -2019 ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್ರಾವ್, ನಮ್ಮಲ್ಲಿ ಜನರ ಕೊರತೆ ಇಲ್ಲ. ಆದ್ರೆ ಮಾನವ ಸಂಪನ್ಮೂಲದ ಕೊರತೆ ಇದೆ ಎಂದರು. ಪಠ್ಯ ವಿಷಯಗಳಲ್ಲಿ ಶೇ.95ರಷ್ಟು ಅಂಕ ಪಡೆದು ಸರಿಯಾದ ಉದ್ಯೋಗ ಸಿಗದಿದ್ದಾಗ ಬಹಳಷ್ಟು ಮಂದಿ ಖಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತವೆ ಎಂದರು.