ಬೆಂಗಳೂರು: ನೈರುತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದರು.
ರಾಜ್ಯಕ್ಕೆ ಮುಂಗಾರು ಪ್ರವೇಶ: ಕರಾವಳಿ-ಮಲೆನಾಡು ಭಾಗದಲ್ಲಿ ಮಳೆ
ಕರಾವಳಿ ಪ್ರವೇಶಿಸಿರುವ ಮುಂಗಾರು ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಲಿದೆ. ನೈರುತ್ಯ ಮಾರುತಗಳು ತೇವಾಂಶ ಹೊತ್ತು ತಂದು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದರು.
ಮಳೆ ಆರಂಭ
ಈ ಕುರಿತು ಮಾತನಾಡಿದ ಅವರು, ಕರಾವಳಿ ಪ್ರವೇಶಿಸಿರುವ ಮುಂಗಾರು ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಲಿದೆ. ನೈರುತ್ಯ ಮಾರುತಗಳು ತೇವಾಂಶ ಹೊತ್ತು ತಂದು ಮಳೆಯಾಗಲಿದೆ ಎಂದು ತಿಳಿಸಿದರು.
ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಒಳನಾಡಿನ ಎಲ್ಲಾ ಪ್ರದೇಶಗಳಲ್ಲೂ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿಯೂ ಅಲ್ಲಲ್ಲಿ ಮಳೆಯಾಗಿದೆ ಎಂದು ತಿಳಿಸಿದರು.