ಬೆಂಗಳೂರು: ರಾಜಸ್ಥಾನದ ಜೋಧ್ಪುರಕ್ಕೆ ವಿಶೇಷ ಶ್ರಮಿಕ್ ರೈಲು ಇಂದು ಮಧ್ಯಾಹ್ನ 2 ಗಂಟೆಗೆ ಹೊರಡಲಿದೆ. ಲಾಕ್ಡೌನ್ ಇನ್ನೂ ಮುಂದುವರೆಯೋ ಸಾಧ್ಯತೆ ಇರುವುದರಿಂದ ಬಹುತೇಕ ಮಂದಿ ತಮ್ಮ ಊರಿನ ಕಡೆ ಮುಖ ಮಾಡಿದ್ದಾರೆ.
ರೈಲು ಹತ್ತುವ ಮುನ್ನ ಪ್ರಯಾಣಿಕರು ಅರಮನೆ ಮೈದಾನದ ಬಳಿ ಸೇರಬೇಕು. ಅಲ್ಲಿ ಪೊಲೀಸರು, ಬಿಬಿಎಂಪಿ ಹಾಗೂ ಜಿಲ್ಲಾಡಳಿತ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ನಂತರ ಊರಿಗೆ ಕಳುಹಿಸುವ ವ್ಯವಸ್ಥೆ ಮಾಡಿಕೊಡ್ತಾರೆ. ಹೀಗಾಗಿ ಸದ್ಯ ಅರಮನೆ ಮೈದಾನದ ಬಳಿ ಸಾವಿರಾರು ಪ್ರಯಾಣಿಕರು ಜಮಾಯಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಚಿಕ್ಕಬಾಣಾವಾರ ರೈಲು ನಿಲ್ದಾಣದಿಂದ ಈ ರೈಲು ಹೊರಡಲಿದೆ.