ಬೆಂಗಳೂರು: ಭಂಟರ ಸಂಘ ಬೆಂಗಳೂರು ವತಿಯಿಂದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಬೆಂಗಳೂರಿನಲ್ಲಿ ಭಂಟರ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ
ಬೆಂಗಳೂರು, ಭಂಟರ ಸಂಘ ಬೆಂಗಳೂರು ವತಿಯಿಂದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ನಗರದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಭವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಿ. ಡಾ. ಮಧುಕರ ಶೆಟ್ಟಿ ಐಪಿಎಸ್ ಸ್ಮಾರಕ ಪ್ರಶಸ್ತಿಯನ್ನು ಹಿರಿಯ ಐಎಫ್ ಎಸ್ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರೊ. ಡಾ. ಎನ್.ಆರ್ ಶೆಟ್ಟಿಯವರಿಗೆ ದಿ. ಶ್ರೀ ಕೆ.ಪಿ ರಾಮಣ್ಣ ಶೆಟ್ಟಿ ಸ್ಮಾರಕ ಶೈಕ್ಷಣಿಕ ಸಾಧಕ ಪ್ರಶಸ್ತಿ ನೀಡಲಾಯಿತು. ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಭಂಟ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ರಾಜೀವ್ ಗಾಂಧಿ ವಿ.ವಿ. ವಿಶ್ರಾಂತ ಉಪ ಕುಲಪತಿ ಡಾ. ರಮಾನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.