ಕರ್ನಾಟಕ

karnataka

ಕಲ್ಲು ಕ್ವಾರಿಯಲ್ಲಿ ಈಜಲು ಹೋದ ಎಸ್ಎಸ್ಎಲ್​ಸಿ ವಿದ್ಯಾರ್ಥಿ ನೀರುಪಾಲು

ಬೆಂಗಳೂರಿನಲ್ಲಿ ಈಜಲು ತೆರಳಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.

By

Published : Sep 29, 2019, 10:51 PM IST

Published : Sep 29, 2019, 10:51 PM IST

ಈಜಲು ಹೋದ ಎಸ್ಎಸ್ಎಲ್​ಸಿ ವಿದ್ಯಾರ್ಥಿ ನೀರುಪಾಲು

ಬೆಂಗಳೂರು: ಈಜಲು ಹೋಗಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈಜಲು ಹೋದ ಎಸ್ಎಸ್ಎಲ್​ಸಿ ವಿದ್ಯಾರ್ಥಿ ನೀರುಪಾಲು

ಶಭಾಷ್ (16) ಮೃತ ದುರ್ದೈವಿ. ಬಿಸಿಲಿನ ತಾಪಕ್ಕೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಪಕ್ಕದ ಪಿಲ್ಲಗಾನಹಳ್ಳಿ ಕಲ್ಲಿನ ಕ್ವಾರಿಯಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ.

ಬಾಲಕನಿಗಾಗಿ ಅಗ್ನಿಶಾಮಕ ದಳ ಹಾಗೂ ತಲಘಟ್ಟಪುರ‌ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪಿಲ್ಲಗಾನಹಳ್ಳಿಯ ಮೃತನ ಮನೆಯಲ್ಲಿ ಮಗನ ಕಳೆದುಕೊಂಡ ದುಃಖ ಮಡುಗಟ್ಟಿದೆ.

ABOUT THE AUTHOR

...view details