ಕರ್ನಾಟಕ

karnataka

By

Published : Nov 18, 2019, 2:24 PM IST

ETV Bharat / state

ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ: ಎಸ್​.ಟಿ.ಸೋಮಶೇಖರ್​​​​

ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅಂಜನಾನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದರು.

ಎಸ್.ಟಿ. ಸೋಮಶೇಖರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅಂಜನಾನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದರು. ಸೋಮಶೇಖರ್ ಅವರಿಗೆ ಕೇಂದ್ರ ಸಚಿವ ಡಿ.ವಿ‌.ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಕೃಷ್ಣಪ್ಪ ಹಾಗೂ ಮುನಿರತ್ನ ಸಾಥ್ ನೀಡಿದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಸೋಮಶೇಖರ್, ಇಪ್ಪತ್ತು ವರ್ಷಗಳಿಂದ ನಾನು ಈ ಕ್ಷೇತ್ರದಲ್ಲಿ ಇದ್ದು, ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದರು. ಪಾದರಸದಂತೆ ಸಿಎಂ ಬಿಎಸ್​ವೈ ಕೆಲಸ ಮಾಡುತ್ತಿದ್ದು, ಅವರ ಜೊತೆ ನಮ್ಮ ಕ್ಷೇತ್ರಕ್ಕಾಗಿ ಶ್ರಮಿಸುತ್ತೇನೆ ಎಂದು ಹೇಳಿದರು. ನಾನ್ಯಾರು ಅಂತ ಕ್ಷೇತ್ರದ ಜನತೆಗೆ ಗೊತ್ತಿದೆ. ಅಭಿವೃದ್ಧಿ ಕಾರಣಕ್ಕಾಗಿ ನಾನು ಬಿಜೆಪಿ ಸೇರ್ಪಡೆಯಾಗಿದ್ದು, ನಾನು ಈ ಕ್ಷೇತ್ರದಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಸ್.ಟಿ.ಸೋಮಶೇಖರ್ ನಾಮಪತ್ರ ಸಲ್ಲಿಕೆ

ಇನ್ನು ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಯಶವಂತಪುರ ಕ್ಷೇತ್ರದಲ್ಲಿ ಈ ಹಿಂದೆ ಬಿಜೆಪಿ-ಕಾಂಗ್ರೆಸ್ ಮಧ್ಯೆ ಹೋರಾಟ ಇತ್ತು. ಆದರೆ ಈಗ ಸೋಮಶೇಖರ್ ಬಿಜೆಪಿಗೆ ಬಂದಿದ್ದಾರೆ. ಹೀಗಾಗಿ ಒನ್ ಸೈಡ್ ಚುನಾವಣೆ ನಡೆಯುತ್ತದೆ ಎಂದರು. ಸೋಮಶೇಖರ್ ತೆಗೆದುಕೊಂಡ ತೀರ್ಮಾನಕ್ಕೆ ಜನ ಬೆಂಬಲ ಸಿಕ್ಕಿದ್ದು, ಅವರು ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದಾರೆ. ಬಹುಮತದಿಂದ ನಾವು ಗೆಲ್ಲುತ್ತೇವೆ ಎಂದರು.

ಇನ್ನು ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಬಾಕಿ ಇದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರಿಯಲಿದೆ. ಒಗ್ಗಟ್ಟಾಗಿ ನಾವು ಗೆಲವಿಗಾಗಿ ಶ್ರಮಿಸುತ್ತೇವೆ ಎಂದರು.

ABOUT THE AUTHOR

...view details