ಬೆಂಗಳೂರು :ಕೊರೊನಾ ಸೋಂಕಿನ ನಡುವೆಯೂ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದ ನ್ಯಾಯಾಲಯಗಳು ಆಗಸ್ಟ್ ತಿಂಗಳಲ್ಲಿ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿಸಿವೆ.
ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಅವರು ಮಾಹಿತಿ ನೀಡಿದ್ದಾರೆ. ಅದರಂತೆ ಹೈಕೋರ್ಟ್ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳು ಆಗಸ್ಟ್ 1ರಿಂದ 28ರವರೆಗೆ ಒಟ್ಟು 16,302 ಪ್ರಕರಣ ಇತ್ಯರ್ಥಪಡಿಸಿವೆ.