ಮೈಸೂರು: ನಗರದ ಮಹಾರಾಣಿ ಮಹಿಳಾ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಲೇಜಿಗೆ ಆಗಮಿಸಿದ್ದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಕೋವಿಡ್-19 ಪರೀಕ್ಷೆ ನಡೆಸಿದ ಬಗ್ಗೆ ಮಾಹಿತಿ ಪಡೆದ ಅವರು, ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಸಾರಿಗೆ ಹಾಗೂ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ಬಗ್ಗೆ ಚರ್ಚಿಸಿದರು. ಕಾಲೇಜಿನ ಕಟ್ಟಡ, ಶೌಚಾಲಯ, ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಹಾಗೂ ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡುವುದರ ಸಂಬಂಧ ಮಾಹಿತಿ ಪಡೆದರು.