ಬೆಂಗಳೂರು: ಮೇಕೆದಾಟು ಯೋಜನೆ ಆರಂಭಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಅನುಮತಿ ನೀಡಿದ್ದು, ಆದಷ್ಟು ಬೇಗ ಕೇಂದ್ರದ ಅನುಮತಿ ಪಡೆದು ಯೋಜನೆ ಆರಂಭಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಆದಷ್ಟು ಬೇಗ ಮೇಕೆದಾಟು ಯೋಜನೆ ಆರಂಭಕ್ಕೆ ಕ್ರಮ: ಸಿಎಂ - CM BS yadiyurappa reaction on mekedatu project
ಮೇಕೆದಾಟು ಯೋಜನೆ ಸಂಬಂಧ ಆದಷ್ಟು ಬೇಗ ಕೇಂದ್ರದ ಅನುಮತಿ ಪಡೆದು ಯೋಜನೆ ಆರಂಭಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಹೇಳಿದರು.
![ಆದಷ್ಟು ಬೇಗ ಮೇಕೆದಾಟು ಯೋಜನೆ ಆರಂಭಕ್ಕೆ ಕ್ರಮ: ಸಿಎಂ CM BSY](https://etvbharatimages.akamaized.net/etvbharat/prod-images/768-512-12181624-thumbnail-3x2-mng.jpg)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮೇಕೆದಾಟು ಯೋಜನೆ ಸಂಬಂಧ ಸಿಎಂ ಹೇಳಿಕೆ
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪಾಲಿಗೆ ಮೇಕೆದಾಟು ಯೋಜನೆ ಬಹಳ ಮಹತ್ವದ್ದಾಗಿದೆ. ಈ ಯೋಜನೆಯಿಂದ ನಾಲ್ಕು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಬೆಂಗಳೂರಿಗೆ ಕುಡಿಯುವ ನೀರು ಬರಲಿದೆ. ಆದರೆ ತಮಿಳುನಾಡು ಸರ್ಕಾರ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಎನ್ ಜಿಟಿ ಮುಂದೆ ಅರ್ಜಿ ಸಲ್ಲಿಸಿತ್ತು ಎಂದರು.
ಈ ದಿನ ಎನ್ಜಿಟಿ ನಮ್ಮ ವಾದವನ್ನು ಮನ್ನಿಸಿ ಯೋಜನೆಗೆ ಹಸಿರು ನಿಷಾನೆ ತೋರಿದೆ. ಹಾಗಾಗಿ ಕೇಂದ್ರದ ಅನುಮತಿ ಪಡೆದು, ಆದಷ್ಟು ಬೇಗ ಯೋಜನೆ ಆರಂಭಕ್ಕೆ ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
Last Updated : Jun 18, 2021, 7:37 PM IST