ಕರ್ನಾಟಕ

karnataka

ETV Bharat / state

ಅತ್ಯಾಚಾರಿ ಮನಸ್ಸುಗಳು ಭಯಪಡುವಂತಹ ಶಿಕ್ಷೆ ವಿಧಿಸಬೇಕು : ವಿದ್ಯಾರ್ಥಿಗಳ ಮೌನ ಪ್ರತಿಭಟನೆ - ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಹೈದರಾಬಾದ್​ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ನಗರದ ಎಚ್ಎಸ್ಆರ್ ಲೇಔಟ್​ನಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಮೌನ ಪ್ರತಿಭಟನೆ
ವಿದ್ಯಾರ್ಥಿಗಳ ಮೌನ ಪ್ರತಿಭಟನೆ

By

Published : Dec 1, 2019, 6:52 AM IST

Updated : Dec 1, 2019, 8:06 AM IST

ಬೆಂಗಳೂರು : ಹೈದರಾಬಾದ್​ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.

ಹೈದರಾಬಾದ್ ವೈದ್ಯೆ ಮೇಲೆ ನಡೆದಿರುವ ಅಮಾನವೀಯ ಕೃತ್ಯ ಮತ್ತೆ ಎಲ್ಲಿಯೂ ನಡೆಯದಂತೆ ಎಚ್ಚರ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ರೀತಿಯ ಕೆಲಸವನ್ನು ಮಾಡಬೇಕೆಂಬ ಯೋಚಿಸಿದರು ಭಯಪಡುವಂತಹ ಶಿಕ್ಷೆ ಕೊಡುಬೇಕು. ಈ ಮೂಲಕ ಸಮಾಜದ ಹಿತವನ್ನು ಕಾಪಾಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.

ಎಚ್ಎಸ್ಆರ್ ಲೇಔಟ್ ಒಂದನೇ ಸೆಕ್ಟರ್​ನಿಂದ ಮೂರನೇ ಸೆಕ್ಟರ್​ನವರಿಗೆ ಮೇಣದ ಬತ್ತಿಯನ್ನು ಹಿಡಿದು ಮೌನವಾಗಿ ವಿದ್ಯಾರ್ಥಿಗಳು ಪ್ರತಿಭಟಿಸಿ ನ್ಯಾಯ ಬೇಕು ಎಂದು ಪ್ರತಿಭಟಿಸಿದರು.

Last Updated : Dec 1, 2019, 8:06 AM IST

ABOUT THE AUTHOR

...view details