ಕರ್ನಾಟಕ

karnataka

ETV Bharat / state

ಬಿಜೆಪಿ ಕೇಂದ್ರ ಕಚೇರಿಗೆ ಸುಮಲತಾ ಭೇಟಿ, ಹೆಚ್ಚಿದ ಕುತೂಹಲ!

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾದ ಸುಮಲತಾ ಅಂಬರೀಶ್ ಇಂದು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದರು.

By

Published : Jun 8, 2019, 8:44 PM IST

ಬಿಜೆಪಿ ಕೇಂದ್ರ ಕಛೇರಿಗೆ ಸಂಸದೆ ಸುಮಲತಾ ಅಂಬರೀಶ್ ಭೇಟಿ..!

ಬೆಂಗಳೂರು:ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಇಂದು ದಿಢೀರ್ ಅಂತ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ಕೊಟ್ಟಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಜೊತೆಗೆ ಸುಮಲತಾ ಅಂಬರೀಶ್ ಭೇಟಿ‌ ಮಾಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ಚುನಾವಣೆಯಲ್ಲಿ ಬಿಜೆಪಿ ನನಗೆ ಬೆಂಬಲ ನೀಡಿತ್ತು. ಆದ್ದರಿಂದ ಬಿಜೆಪಿ ನಾಯಕರಿಗೆ ಧನ್ಯವಾದ ಹೇಳಲು ಬಂದಿದ್ದೆ. ಅಭಿವೃದ್ಧಿ ವಿಚಾರವಾಗಿ ಅವರ ಸಹಕಾರ ಕೇಳೋದು ನನ್ನ ಜವಾಬ್ದಾರಿ ಎಂದರು.

'ಬಿಜೆಪಿಗೆ ನನ್ನ ಬೆಂಬಲದ ಅವಶ್ಯಕತೆ ಇಲ್ಲ'

ಬಿಜೆಪಿ ನನ್ನ ಬೆಂಬಲ ಕೇಳಿಲ್ಲ.ಅಭಿವೃದ್ಧಿ ವಿಚಾರವಾಗಿ ಪಕ್ಷ ಸೇರುವ ಪ್ರಮೇಯ ಬಂದ್ರೆ, ಮತ ಹಾಕಿದ ಜನರ ಅಭಿಪ್ರಾಯ ಕೇಳಿ ಮುಂದಿನ ಹೆಜ್ಜೆ ಇಡ್ತೇನೆ ಎಂದ್ರು.

ಬಿಜೆಪಿ ಕೇಂದ್ರ ಕಛೇರಿಗೆ ಸಂಸದೆ ಸುಮಲತಾ ಅಂಬರೀಶ್ ಭೇಟಿ..!

ಬಿಜೆಪಿ 303 ಸ್ಥಾನ ಗೆದ್ದಿದೆ, ಆದ್ದರಿಂದ ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಅಗತ್ಯ ಇಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ರು.

ABOUT THE AUTHOR

...view details