ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿಯಲ್ಲಿ ವಿಕೇಂದ್ರೀಕೃತ ಪದ್ಧತಿಯನ್ನು ಜಾರಿಗೊಳಿಸಿ ಸ್ಥಳೀಯ ಮಟ್ಟದಲ್ಲಿಯೇ ಕಸವನ್ನು ಸಂಸ್ಕರಣೆ ಮಾಡುವ ಪ್ರಕ್ರಿಯೆ ಜಾರಿಗೊಳಿಸಿದಾಗ ಮಾತ್ರ ಕಸದ ಸಮಸ್ಯೆ ಬಗೆಹರಿಸಬಹುದಾಗಿದೆ. ಅದಕ್ಕೆ ನಾಗರಿಕರೆಲ್ಲರೂ ಸಂಪುರ್ಣ ಸಹಕಾರ ನೀಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ನಿರ್ವಹಣಾ ಕೋಶದ ವತಿಯಿಂದ ಟೌನ್ಹಾಲ್ನಲ್ಲಿ "ಸ್ವಚ್ಛ ಸರ್ವೇಕ್ಷಣ 2023ರ ಕಾರ್ಯಕ್ರಮ"ದಡಿ ಶ್ರಮಿಸುತ್ತಿರುವವರಿಗೆ ಹಮ್ಮಿಕೊಂಡಿದ್ದ ಉತ್ತೇಜನಾ ಅಭಿನಂದನಾ ಸಮಾರಂಭವನ್ನು ಚಾಲನೆ ನೀಡಿದ ಬಳಿಕ ಮಾತನಾಡಿದ ತುಷಾರ್ ಗಿರಿನಾಥ್, ನಮ್ಮ ಮನೆ ಹಾಗೂ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿದಾಗ ನಗರವನ್ನು ಸ್ವಚ್ಛವಾಗಿಡಲು ಸಾಧ್ಯ. ಆದ್ದರಿಂದ ನಗರದ ನಾಗರಿಕರೆಲ್ಲರೂ ಕಸವನ್ನು ಸರಿಯಾದ ರೀತಿಯಲ್ಲಿ ವಿಂಗಡಿಸಿ ಪಾಲಿಕೆಯ ಕಸದ ವಾಹನಗಳಿಗೆ ನೀಡುವ ಮೂಲಕ ನಗರವನ್ನು ಸ್ವಚ್ಛತೆಯಿಂದಿರುವಂತೆ ಮಾಡಬೇಕು. ಕಸವನ್ನು ರಸ್ತೆ ಅಥವಾ ಬೀದಿ ಬದಿ ಬಿಸಾಡುವುದು, ಸುಡುವುದನ್ನು ಮಾಡದೆ ಪ್ರತಿನಿತ್ಯ ತಪ್ಪದೆ ಪಾಲಿಕೆಯ ವಾಹನಗಳಿಗೆ ನೀಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು.
16,000 ಕ್ಕೂ ಹೆಚ್ಚು ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ ನಗರವನ್ನು ಸ್ವಚ್ಛ ಮಾಡುತ್ತಾರೆ. ಅದಲ್ಲದೇ, ಯಾಂತ್ರಿಕ ಕಸ ಗುಡಿಸುವ ಯಂತ್ರಗಳ ಮೂಲಕವೂ ಸ್ವಚ್ಚತೆ ಮಾಡಲಾಗುತ್ತದೆ. ಆದರೆ, ಮನೆಮನೆಯಿಂದ ಕಸ ಸಂಗ್ರಹಿಸುವ ಪದ್ಧತಿಯನ್ನು ಸರಿಯಾಗಿ ಪಾಲಿಸದಿರುವ ಕಾರಣ ನಗರದಲ್ಲಿ ಕಸದ ಸಮಸ್ಯೆಯಿದೆ. ಅದೆಲ್ಲವನ್ನು ಮಾರ್ಪಾಡು ಮಾಡಬೇಕಾದರೆ ಎಲ್ಲಾ ನಾಗರಿಕರ ಸಹಕಾರ ಅತ್ಯಗತ್ಯ. ರಾತ್ರಿ ವೇಳೆ ಬೀದಿ ಬದಿ ಕಸ ಬಿಸಾಡುವುದರಿಂದ ನಗರದಲ್ಲಿ ಸಾಕಷ್ಟು ಕಡೆ ಬ್ಲಾಕ್ ಸ್ಪಾಟ್ಗಳು ಉತ್ಪತ್ತಿಯಾಗುತ್ತವೆ. ಅದನ್ನು ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಚಗೊಳಿಸುತ್ತಾರೆ. ಇನ್ನೂ ಕೆಲವೆಡೆ ಸ್ವಚ್ಛ ಮಾಡಿ ಸೌಂದರ್ಯೀಕರಣ ಮಾಡಲಾಗಿರುತ್ತದೆ. ಅದರೆ, ಮತ್ತದೇ ಸ್ಥಳದಲ್ಲಿ ಕೆಲವೇ ದಿನದಲ್ಲಿ ಮತ್ತೆ ಬ್ಲಾಕ್ಸ್ಪಾಟ್ ಉತ್ಪತ್ತಿಯಾಗುತ್ತದೆ. ಇದೆಲ್ಲವೂ ನಿಯಂತ್ರಣವಾದಾಗ ನಗರ ಸ್ವಚ್ಛನಗರವಾಗಿಸಲು ಸಾಧ್ಯ ಎಂದು ಹೇಳಿದರು.
ಉತ್ತಮ ರೀತಿಯಲ್ಲಿ ಕೆಲಸ ಮಾಡಿದಾಗ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಉತ್ತಮ ರ್ಯಾಂಕ್ಗಳಿಸಲು ಸಾಧ್ಯ: ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಬಿಬಿಎಂಪಿಗೆ ಕಳೆದ ಬಾರಿ ನಿರೀಕ್ಷಿತ ರ್ಯಾಂಕ್ ಲಭಿಸಿಲ್ಲ. ಈ ಪೈಕಿ ಪ್ರಸಕ್ತ ಸಾಲಿನಲ್ಲಿ ನಗರದ ಕಸದ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಉತ್ತಮ ರ್ಯಾಂಕ್ ಪಡೆಯಬೇಕು. ಪಾಲಿಕೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ನಿರ್ವಹಿಸಬೇಕು. ಜೊತೆಗೆ ನಾಗರಿಕರಿಗೆ ಘನತ್ಯಾಜ್ಯ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಉತ್ತಮ ರೀತಿಯಲ್ಲಿ ಕೆಲಸ ಮಾಡಿದಾಗ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಉತ್ತಮ ರ್ಯಾಂಕ್ ಗಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಘನತ್ಯಾಜ್ಯ ನಿರ್ವಹಣಾ ವಿಭಾಗದ ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್, ಜಂಟಿ ಆಯುಕ್ತ ಪರಶುರಾಮ್ ಶಿನ್ನಾಳಕರ್, ವಲಯ ಜಂಟಿ ಆಯುಕ್ತ ಕೃಷ್ಣಮೂರ್ತಿ, ಮುಖ್ಯ ಅಭಿಯಂತರರಾದ ಪರಮೇಶ್ವರಯ್ಯ, ಮುಖ್ಯ ಮಾರ್ಷಲ್ ರಾಜ್ ಭೀರ್ ಸಿಂಗ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
5 ವರ್ಗಗಳಲ್ಲಿ ಪ್ರಶಸ್ತಿ ವಿತರಣೆ: