ಬೆಂಗಳೂರು: ಸುಸ್ತಿ ಕೃಷಿ ಸಾಲಗಳ ವಸೂಲಾತಿಗೆ ಸಂಬಂಧಿಸಿದಂತೆ ಡಿಸೆಂಬರ್ 27 ರಂದು ಹೊರಡಿಸಿದ್ದ ಆದೇಶದ ಪತ್ರವನ್ನು ತಡೆ ಹಿಡಿದು ಸಹಕಾರ ಸಂಘಗಳ ನಿಬಂಧಕರು ಮರು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಸಾಲ ಮರುಪಾವತಿಯ ಆತಂಕಕ್ಕೆ ಸಿಲುಕಿದ್ದ ರೈತ ನಿಟ್ಟುಸಿರು ಬಿಡುವಂತಾಗಿದೆ.
ಸುಸ್ತಿ ಕೃಷಿ ಸಾಲ ವಸೂಲಿಗೆ ಆದೇಶ ಹೊರಡಿಸುತ್ತಿದ್ದಂತೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದು ಟೀಕಾಪ್ರಹಾರ ನಡೆಸಿದ್ದವು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರೈತ ವಿರೋಧಿ ಎಂದು ತರಾಟೆ ತೆಗೆದುಕೊಂಡಿದ್ದವು. ಎಲ್ಲಾ ಕಡೆ ಸರ್ಕಾರದ ನೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ, ತನ್ನ ಆದೇಶ ವಾಪಸ್ ಪಡೆದುಕೊಂಡಿದೆ.