ಬೆಂಗಳೂರು:ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಮುನಿರತ್ನ ಪರ ಬಿಜೆಪಿ ನಾಯಕರು ಅಬ್ಬರದ ಪ್ರಚಾರ ನಡೆಸಿದರು. ರೋಡ್ ಶೋ, ಬೈಕ್ ರ್ಯಾಲಿ ನಡೆಸುವ ಮೂಲಕ ಮತಯಾಚನೆ ಮಾಡಿದರು.
ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಜ್ಞಾನಜ್ಯೋತಿ ನಗರ, ಕೆಗ್ಗುಂಟೆ, ಭೈರವೇಶ್ವರ ನಗರ, ಉಲ್ಲಾಳ ಮುಖ್ಯ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು. ತೆರೆದ ವಾಹನದಲ್ಲಿ ಸಚಿವರಾದ ಆರ್. ಅಶೋಕ್, ಡಾ.ನಾರಾಯಣಗೌಡ, ಎಸ್ ಟಿ ಸೋಮಶೇಖರ್ ಜೊತೆಯಲ್ಲಿ ಪ್ರಚಾರ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಿದರು. ಕ್ಷೇತ್ರದ ಯುವಕರನ್ನು ಟಾರ್ಗೆಟ್ ಮಾಡಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯರಿಂದ ರೋಡ್ ಶೋ ನಡೆಸಲಾಯಿತು.