ಕರ್ನಾಟಕ

karnataka

ETV Bharat / state

ಕೊಯ್ನಾ ಡ್ಯಾಂ ನೀರು ಬಿಡುಗಡೆ ಪ್ರಮಾಣ ತಗ್ಗಿಸಲು ಹೇಳಿ... ಬಿಎಸ್​ವೈಗೆ ಸಿದ್ದರಾಮಯ್ಯ ಸಲಹೆ - ಕರ್ನಾಟಕದಲ್ಲಿ ಪ್ರವಾಹ

ಕೇಂದ್ರದ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಡ ಹೇರಿ ಕೊಯ್ನಾ ಜಲಾಶಯದಿಂದ ಬಿಡುಗಡೆಯಾಗುತ್ತಿರುವ ನೀರಿನ ಪ್ರಮಾಣ ತಗ್ಗಿಸಬೇಕು ಎಂದು ಬಿಎಸ್​ವೈಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಸಿದ್ದರಾಮಯ್ಯ

By

Published : Aug 8, 2019, 3:18 PM IST

Updated : Aug 8, 2019, 3:48 PM IST

ಬೆಂಗಳೂರು:ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡದಂತೆ ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯವನ್ನು ಸಿಎಂ ಬಿಎಸ್​ವೈ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ರಾಜ್ಯದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಕೃಷ್ಣಾ ನದಿ ನೀರಿನ ಪ್ರವಾಹದಿಂದ ಸಮಸ್ಯೆಗೆ ಸಿಲುಕಿವೆ. ಪ್ರವಾಹ ಸ್ಥಿತಿಗೆ ಕೊಯ್ನಾ ಜಲಾಶಯದಿಂದ ಬಿಡುಗಡೆಯಾಗುತ್ತಿರುವ ಭಾರೀ ಪ್ರಮಾಣದ ನೆರೆ ನೀರು ಕಾರಣ. ಇದರಿಂದ ಬಿ.ಎಸ್.ಯಡಿಯೂರಪ್ಪ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಕೊಯ್ನಾ ಜಲಾಶಯದ ನೀರಿನ ಬಿಡುಗಡೆಯನ್ನು ನಿಯಂತ್ರಿಸುವಂತೆ ಮಹಾರಾಷ್ಟ್ರ ಸರ್ಕಾರದ ಮೇಲೆ ಕೇಂದ್ರ ಸರ್ಕಾರದ ಮೂಲಕ‌ ಒತ್ತಡ ಹೇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್​ನಲ್ಲಿ ಒತ್ತಾಯಿಸಿದ್ದಾರೆ.

ರಕ್ಷಣೆಗೆ ನೆರವಾಗಿ:

ಉತ್ತರ ಕರ್ನಾಟಕದ ಜ‌ನತೆ ಭಾರೀ ಪ್ರಮಾಣದ ಪ್ರವಾಹ ಪರಿಸ್ಥಿತಿಯಿಂದಾಗಿ ಕಷ್ಟ ನಷ್ಟಕ್ಕೀಡಾಗಿ ಕಂಗಾಲಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಅವರಿಗೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯ. ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಪ್ರವಾಹಪೀಡಿತರ ನೆರವಿಗೆ ತಕ್ಷಣ ಧಾವಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದು ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

Last Updated : Aug 8, 2019, 3:48 PM IST

ABOUT THE AUTHOR

...view details