ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ವರ್ಷಕ್ಕೆ ಮುನ್ನವೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದು, 32 ಸದಸ್ಯರ ರಾಜಕೀಯ ವ್ಯವಹಾರಗಳ ಸಮಿತಿ ರಚಿಸಲಾಗಿದೆ.
ಕರ್ನಾಟಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸಮಿತಿ ರಚಿಸಿರುವ ಹಿನ್ನೆಲೆ ರಾಜ್ಯದ ನಾಯಕರಿಗೆ ಹೆಚ್ಚಿನ ಸ್ಥಾನ ಕಲ್ಪಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಜೊತೆ ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡುವ ಐವರು ಕಾರ್ಯದರ್ಶಿಗಳನ್ನು ಹೈಕಮಾಂಡ್ ನೇಮಕ ಮಾಡಿದೆ.
ಕರ್ನಾಟಕದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಮಿತಿ ರಚನೆ :ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ, ಮಾರ್ಗರೇಟ್ ಆಳ್ವಾ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆ, ಅಲ್ಲಂ ವೀರಭದ್ರಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಬೈರೇಗೌಡ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಧ್ರುವನಾರಾಯಣ, ಸಂಸದ ಡಿ.ಕೆ.ಸುರೇಶ್, ಶಾಸಕ ಯು.ಟಿ.ಖಾದರ್, ಮಾಜಿ ಸ್ಪೀಕರ್ ರಮೇಶ್ಕುಮಾರ್, ಸುನಿಲ್ ಕಾನುಗೋಳು, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಎನ್.ಎಸ್.ಬೋಸರಾಜು, ಸಂದೀಪ್ ಈ ಸಮಿತಿಯ ಸದಸ್ಯರಾಗಿದ್ದಾರೆ.