ಬೆಂಗಳೂರು :ಕಳೆದ ಎಂಟು ವರ್ಷಗಳ ಹಿಂದೆ ನಗರದ ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.
2013ರ ನವೆಂಬರ್ 19ರಂದು ಜ್ಯೋತಿ ಉದಯ್ ಮೇಲೆ ಅಪರಾಧಿ ಮಧುಕರ್ ರೆಡ್ಡಿ ಹಲ್ಲೆ ಮಾಡಿದ್ದ. ಈ ಸಂಬಂಧ ನಗರ ಪೊಲೀಸರು ಮಧುಕರ್ನನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಬಳಿಕ ಮೂರು ವರ್ಷಗಳ ಕಾಲ ವಿಚಾರಣೆ ನಡೆಸಿದ 65ನೇ ಸಿಸಿಹೆಚ್ ನ್ಯಾಯಾಲಯ ಇಂದು ಅಪರಾಧಿಗೆ 12 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.