ಕರ್ನಾಟಕ

karnataka

By

Published : May 16, 2020, 10:23 AM IST

ETV Bharat / state

ಕೋಲಾರದ ಕೊರೊನಾ ಸೋಂಕಿತ ಪರಾರಿ ಪ್ರಕರಣ: ಸಿನಿಮೀಯ ರೀತಿಯ ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ

ಕೋಲಾರದಿಂದ ಸೋಂಕಿತ ವ್ಯಕ್ತಿ ಎಸ್ಕೇಪ್ ಆಗ್ತಿದ್ದಂತೆ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಮತ್ತು ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಮೊಬೈಲ್ ಲೊಕೇಷನ್ ಮೂಲಕ ಆತನನ್ನು ವಶಕ್ಕೆ ಪಡೆದಿದ್ದಾರೆ‌.

corona infected person
ಕೋಲಾರದ ಕೊರೊನಾ ಸೋಂಕಿತ ವ್ಯಕ್ತಿ ಎಸ್ಕೇಪ್ ಪ್ರಕರಣ

ಬೆಂಗಳೂರು: ಕೋಲಾರದಲ್ಲಿ ಶುಕ್ರವಾರ ಕೊರೊನಾ ಸೋಂಕಿತನೊಬ್ಬನ ಪರಾರಿ ಪ್ರಕರಣದ ಸಂಬಂಧ ಸಿನಿಮೀಯ ರೀತಿಯಲ್ಲಿ ಬೆಂಗಳೂರು ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಸೋಂಕಿತ ಎಸ್ಕೇಪ್ ಆಗ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಆತನ ಮೊಬೈಲ್ ಲೊಕೇಷನ್ ಟ್ರೇಸ್ ಮಾಡಿ ಹಿಡಿದಿದ್ದಾರೆ‌.

ಬೆಂಗಳೂರಿನ ಬಸವನಗುಡಿಯಲ್ಲಿನ ತನ್ನ ಹೆಂಡತಿಯ ತವರು ಮನೆಗೆ ಬಂದು ತಲೆಮರೆಸಿಕೊಳ್ಳಲು ಯತ್ನಿಸಿದ್ದ. ಆರೋಗ್ಯ ಇಲಾಖೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಮಾರ್ಗಮಧ್ಯೆ ಚಾಲಾಕಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಿಬಿಎಂಪಿ ಸಿಹೆಚ್​ಒ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ಈ ಕಾರ್ಯಾಚರಣೆ ವಿಫಲವಾಗಿದ್ದರೆ ಗ್ರೀನ್ ಝೋನ್​ನಲ್ಲಿದ್ದ ಬಸವನಗುಡಿ ರೆಡ್ ಝೋನ್​ ಆಗುತ್ತಿತ್ತು. ಇನ್ನು ಮುನ್ನೆಚ್ಚರಿಕೆ ವಹಿಸಿದ್ದ ಇಲಾಖೆ ಸಿಬ್ಬಂದಿಯು ಸೋಂಕಿತ ವ್ಯಕ್ತಿಯನ್ನು ಸದ್ಯ ನಿಗದಿತ ಆಸ್ಪತ್ರೆಯಲ್ಲಿ ಇರಿಸಿದ್ದಾರೆ.‌

ABOUT THE AUTHOR

...view details