ಬೆಂಗಳೂರು: ಪ್ರವಾಹದಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಕಳೆದುಕೊಮಡಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಮಾಡಿರುವ ವಿದ್ಯಾರ್ಥಿಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ ಮತ್ತು ಪಿ.ಯು.ಸಿ ವ್ಯಾಸಂಗಕ್ಕೆ ಸಂಬಂಧಿಸಿದಂತೆ ದಾಖಲೆಗಳು ಪ್ರವಾಹದಿಂದ ಹಾನಿಗೊಳಗಾಗಿದ್ದರೆ, ಅಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂಕಪಟ್ಟಿ ಕಳೆದುಕೊಂಡವರು ಜಿಲ್ಲಾ ಉಪನಿರ್ದೇಶಕರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನೀಡಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿ ನೀಡುವ ವ್ಯವಸ್ಥೆಯನ್ನ ಪಿಯು ಬೋರ್ಡ್ ಕಲ್ಪಿಸಿದೆ.
ಸಂಬಂಧಪಟ್ಟ ಕಾಲೇಜು ಮತ್ತು ಜಿಲ್ಲೆಯ ಉಪನಿರ್ದೇಶಕರ ಮುಖಾಂತರ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯಾರ್ಥಿಗಳ ದ್ವಿಪ್ರತಿ ಅಂಕಪಟ್ಟಿ ಮತ್ತು ಇತರೆ ಪಿಯುಸಿ ಶಿಕ್ಷಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಶುಲ್ಕ ರಹಿತವಾಗಿ ಇಲಾಖೆಯಿಂದ ನೀಡಲಾಗುವುದು ಎಂದು ಇಲಾಖೆ ಸುತ್ತೊಲೆ ಹೊರಡಿಸಿದೆ.