ಕರ್ನಾಟಕ

karnataka

By

Published : Apr 3, 2020, 9:21 AM IST

ETV Bharat / state

ಕಾಸರಗೋಡು ಹೆದ್ದಾರಿ ಬಿಕ್ಕಟ್ಟು: ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಕಾಸರಗೋಡಿನ ಕೊರೊನಾ ವೈರಸ್ ಸೋಂಕು ಪೀಡಿತರು ಕರ್ನಾಟಕಕ್ಕೆ ಪ್ರವೇಶಿಸಿ ತುರ್ತು ವೈದ್ಯಕೀಯ ಸೇವೆ ಪಡೆಯಲು ಅನುವಾಗುವಂತೆ ಕಾಸರಗೋಡು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ನಾಟಕ‌ ಸರ್ಕಾರ ವಿಧಿಸಿರುವ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲು ಕೇಂದ್ರ ಸರ್ಕಾರಕ್ಕೆಕೇರಳ ಹೈ ಕೋರ್ಟ್ ನೀಡಿರುವ ಮಧ್ಯಂತರ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಟ ಮೆಟ್ಟಿಲೇರಿದೆ.

state government has moved the Supreme Court
ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಬೆಂಗಳೂರು: ಕೇರಳ ಗಡಿ‌ ರಸ್ತೆಗಳಲ್ಲಿ ಕರ್ನಾಟಕ ಸರ್ಕಾರ ವಿಧಿಸಿರುವ ಸಂಚಾರ ನಿರ್ಬಂಧವನ್ನು ತುರ್ತು ವೈದ್ಯಕೀಯ ಸೇವೆಗಳಿಗಾಗಿ ತಕ್ಷಣವೇ ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ‌ ಬುಧವಾರ ರಾತ್ರಿ ಕೇರಳ ಹೈಕೋರ್ಟ್‌ ಹೊರಡಿಸಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ‌‌ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ, ಕೇರಳ ಹೈಕೋರ್ಟ್ ತನ್ನ ಅಧಿಕಾರ ವ್ಯಾಪ್ತಿ ಮೀರಿ ಕೇಂದ್ರ ಸರ್ಕಾರಕ್ಕೆ ಮಧ್ಯಂತರ ಆದೇಶ ಮಾಡಿದೆ.‌‌ ಕಾಸರಗೋಡಿನ ಕೊರೊನಾ ವೈರಸ್ ಸೋಂಕು ಪೀಡಿತರು ಕರ್ನಾಟಕಕ್ಕೆ ಪ್ರವೇಶಿಸಿ ತುರ್ತು ವೈದ್ಯಕೀಯ ಸೇವೆ ಪಡೆಯಲು ಅನುವಾಗುವಂತೆ ಕಾಸರಗೋಡು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ನಾಟಕ‌ ಸರ್ಕಾರ ವಿಧಿಸಿರುವ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.‌

ಕೇರಳ ಹೈಕೋರ್ಟ್ ನ ಈ ಆದೇಶದಿಂದ ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಕಾಸರಗೋಡಿನ ಕೋವಿಡ್ -19 ಸೋಂಕಿತರು ಕರ್ನಾಟಕ ಪ್ರವೇಶ ಮಾಡಲು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಗಡಿ ಭಾಗದ ರಸ್ತೆಗಳನ್ನು ಮುಚ್ಚುವ ವಿಚಾರವು ನಮ್ಮ ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಕೇರಳ ಹೈಕೋರ್ಟ್ ಮಧ್ಯಪ್ರವೇಶ ಮಾಡುವಂತಿಲ್ಲ.

ಇನ್ನೂ ಕೇರಳ ಹೈಕೋರ್ಟ್ ಆದೇಶ ಸಂವಿಧಾನದ 226(2)ರ ಉಲ್ಲಂಘನೆಯಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಸುಪ್ರೀಂಕೋರ್ಟ್ ನಲ್ಲೂ ಅರ್ಜಿ ಸಲ್ಲಿಸಿದೆ. ಈ ಹಂತದಲ್ಲಿ ಕೇರಳ ಹೈಕೋರ್ಟ್ ಯಾವುದೇ ಆದೇಶ ಹೊರಡಿಸಲು ಅವಕಾಶ ಇಲ್ಲ ಎಂದು ಕರ್ನಾಟಕ ಸರ್ಕಾರ ಅರ್ಜಿಯಲ್ಲಿ ವಿವರಿಸಿದೆ.‌ ಅಲ್ಲದೇ, ಕೇರಳ ಹೈಕೋರ್ಟ್ ಆದೇಶಕ್ಕೆ ತಕ್ಷಣವೇ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಕರ್ನಾಟಕ ಮತ್ತು ಕೇರಳ ಗಡಿಭಾಗದಲ್ಲಿ ಸಂಚಾರ ನಿರ್ಬಂಧ ಹೇರಿದ ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಕೇರಳ ಹೈಕೋರ್ಟ್ ಗೆ ಅಲ್ಲಿನ ವಕೀಲರ ಸಂಘವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಪ್ರಕರಣದ ತುರ್ತು ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಎರಡೂ ರಾಜ್ಯಗಳ ಅಡ್ವೊಕೇಟ್ ಜನರಲ್ ವಾದ ಆಲಿಸಿ,‌ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಮುಚ್ಚಿರುವ ರಸ್ತೆಗಳನ್ನು ತೆರೆಯದೆ ಹೋದರೆ ಕಾಸರಗೋಡಿನಲ್ಲಿ ಕೊರೋನಾ ವೈರಸ್ ಸೋಂಕಿನಿಂದ ನರಳುತ್ತಿರುವ ಕೇರಳದ ಪ್ರಜೆಗಳು ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯಿದೆ.

ಮಂಗಳೂರು ಹಾಗೂ ಕಾಸರಗೋಡನ್ನು ಸಂಪರ್ಕಿಸುವ ರಸ್ತೆ ರಾಷ್ಟ್ರೀಯ ಹೆದ್ದಾರಿಯ ಭಾಗವಾಗಿದೆ. ಆ ರಸ್ತೆಯಲ್ಲಿ ವಿಧಿಸಲಾಗಿರುವ ಸಂಚಾರ ನಿರ್ಬಂಧವನ್ನು ವೈದ್ಯಕೀಯ ತುರ್ತು ಸೇವೆಗಳಿಗಾಗಿ ಕೇಂದ್ರ ಸರ್ಕಾರವು ತಕ್ಷಣವೇ ತೆರವುಗೊಳಿಸಬೇಕು ಎಂದು ಆದೇಶಿಸಿತ್ತು.

ABOUT THE AUTHOR

...view details