ಕರ್ನಾಟಕ

karnataka

By

Published : Jun 4, 2020, 8:39 PM IST

ETV Bharat / state

ಆಡಳಿತ ಭಾಷೆಯಲ್ಲಿ 'ದಲಿತ' ಪದ ಬಳಸುವಂತಿಲ್ಲ: ಸರ್ಕಾರ ಆದೇಶ

ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದ ಆಡಳಿತ ಭಾಷೆಯಲ್ಲಿ ದಲಿತ ಎಂಬ ಪದವನ್ನು ಬಳಸಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಗೋವಿಂದ ಕಾರಜೋಳ
ಗೋವಿಂದ ಕಾರಜೋಳ

ಬೆಂಗಳೂರು:ರಾಜ್ಯದ ಆಡಳಿತ ಭಾಷೆಯಲ್ಲಿ ದಲಿತ ಪದ ಬಳಸುವ ಹಾಗಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಪ್ರತಿ

ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದಲ್ಲಿಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣಪತ್ರಗಳಲ್ಲಿ ದಲಿತ ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಪ್ರತಿ

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಡಿಸಿಎಂ ಗೋವಿಂದ ಕಾರಜೋಳ, ಹರಿಜನ ಮತ್ತು ಗಿರಿಜನ ಎನ್ನುವ ಪದ ಬಳಕೆ ಮಾಡಬಾರದು. ಆಂಗ್ಲ ಭಾಷೆಯಲ್ಲಿ ಎಸ್‍ಸಿ/ಎಸ್‍ಟಿ ಎಂದು ನಮೂದಿಸಬಹುದಾಗಿದ್ದು, ಇತರೇ ಭಾಷೆಗಳಲ್ಲಿ ಸೂಕ್ತ ಭಾಷಾಂತರಗೊಳಿಸಿದ ಪದ ಬಳಸಬೇಕು. ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಎಂದು ನಮೂದಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details