ಬೆಂಗಳೂರು: ಮೋಜಿನ ಜೀವನಕ್ಕಾಗಿ ದ್ವಿಚಕ್ರ ವಾಹನ, ಮೊಬೈಲ್, ಲ್ಯಾಪ್ಟಾಪ್ ಹಾಗೂ ಮನೆ ಕಳವು ಮಾಡುತ್ತಿದ್ದ ಇಬ್ಬರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ವಿದ್ಯಾರಣ್ಯಪುರದ ರಂಜಿತ್ (27) ಮತ್ತು ಅಜಿತ್(25) ಬಂಧಿತರು. ಇವರಿಂದ 5 ದ್ವಿಚಕ್ರ ವಾಹನ, 3 ಲ್ಯಾಪ್ಟಾಪ್, ವಿವಿಧ ಕಂಪನಿಗಳ 9 ಮೊಬೈಲ್ ಫೋನ್ ಹಾಗೂ ಒಂದು ಚಿನ್ನದ ಸರ ಸೇರಿದಂತೆ ಒಟ್ಟು 6.87 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇತ್ತೀಚೆಗೆ ವಿದ್ಯಾರಣ್ಯಪುರದ ಅಬ್ದುಲ್ ಖಾದರ್ ಎಂಬುವವರ ಮನೆಯಲ್ಲಿ ಹಾಡಹಗಲೇ ಒಂದು ಮೊಬೈಲ್, ಲ್ಯಾಪ್ಟಾಪ್ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.