ಕರ್ನಾಟಕ

karnataka

ETV Bharat / state

ಸ್ಯಾಂಡಲ್​ವುಡ್ ಸಂಗೀತ ನಿರ್ದೇಶಕನ ಸ್ಟುಡಿಯೋಗೆ ನುಗ್ಗಿದ ಕಳ್ಳರು

ಸಂಗೀತ ನಿರ್ದೇಶಕ ಡಾ.ಕಿರಣ್ ಅವರ ನಿರ್ಮಾಣ ಹಂತದ ಸ್ಟುಡಿಯೋಗೆ ನುಗ್ಗಿದ ಖದೀಮರು ಲಕ್ಷಾಂತರ ರೂ. ಮೌಲ್ಯದ ಸಂಗೀತ ಪರಿಕರಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

By

Published : Apr 16, 2021, 2:11 PM IST

ಸಂಗೀತ ನಿರ್ದೇಶಕ ಡಾ.ಕಿರಣ್
ಸಂಗೀತ ನಿರ್ದೇಶಕ ಡಾ.ಕಿರಣ್

ಬೆಂಗಳೂರು: ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕರೋರ್ವರ ನಿರ್ಮಾಣ ಹಂತದ ಸ್ಟುಡಿಯೋ ನುಗ್ಗಿದ ಖದೀಮರು ಲಕ್ಷಾಂತರ ರೂ. ಮೌಲ್ಯದ ಸಂಗೀತ ಪರಿಕರಗಳನ್ನು ಕಳ್ಳತನ ಮಾಡಿರುವ ಘಟನೆ ತಡರಾತ್ರಿ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕರಿಯಣ್ಣನ ಪಾಳ್ಯದಲ್ಲಿ ನಡೆದಿದೆ.

ಸಂಗೀತ ನಿರ್ದೇಶಕ ಡಾ.ಕಿರಣ್

ಸಂಗೀತ ನಿರ್ದೇಶಕ ಡಾ.ಕಿರಣ್ ಅವರ ನಿರ್ಮಾಣ ಹಂತದ ಸ್ಟುಡಿಯೋದಲ್ಲಿ ಕಳ್ಳತನವಾಗಿದೆ‌. ಉಪೇಂದ್ರ ನಟನೆಯ ಐಲವ್​ಯೂ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ಕಿರಣ್, ಕರಿಯಣ್ಣನ ಪಾಳ್ಯದಲ್ಲಿ ಸ್ಟುಡಿಯೋ ನಿರ್ಮಾಣ ಮಾಡುತ್ತಿದ್ದರು. ಯಾರೂ ಇಲ್ಲದ ಸಮಯ ನೋಡಿಕೊಂಡು ನಿನ್ನೆ ತಡರಾತ್ರಿ ಕಿಟಕಿ ಕೊರೆದು ಒಳ ನುಗ್ಗಿದ ಕಳ್ಳರು ಸುಮಾರು 35 ಲಕ್ಷ ರೂ. ಮೌಲ್ಯದ ಮ್ಯೂಸಿಕ್ ಉಪಕರಣಗಳನ್ನು ಕಳ್ಳತನ ಮಾಡಿದ್ದಾರೆ.

ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ABOUT THE AUTHOR

...view details