ಕರ್ನಾಟಕ

karnataka

ETV Bharat / state

ಶಾರ್ಟ್ ಸರ್ಕ್ಯೂಟ್​ನಿಂದ ರೆಸ್ಟೋರೆಂಟ್​ನಲ್ಲಿ ಅಗ್ನಿ ಅವಘಡ : 25 ಲಕ್ಷ ಮೌಲ್ಯದ ಪೀಠೋಪಕರಣ ಧ್ವಂಸ

ಸುದ್ದಿ ತಿಳಿದು ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಬಂದಿದ್ದು, ಕೂಡಲೇ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ..

By

Published : Dec 26, 2020, 9:14 AM IST

short circuit
ರೆಸ್ಟೋರೆಂಟ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು :ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಕ್ ಔಟ್ ರೆಸ್ಟೋರೆಂಟ್​ನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ. ಇಂದು ನಸುಕಿನಲ್ಲಿ ರೆಸ್ಟೋರೆಂಟ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು‌ ಕ್ಷಣಮಾತ್ರದಲ್ಲಿ ಅಗ್ನಿ ವ್ಯಾಪಿಸಿದೆ. ಇದರ ಪರಿಣಾಮ ರೆಸ್ಟೋರೆಂಟ್​ನಲ್ಲಿದ್ದ 25 ಲಕ್ಷ ಮೌಲ್ಯದ ಪೀಠೋಪಕರಣಗಳು ಧ್ವಂಸವಾಗಿವೆ.

ಓದಿ:ಮನೆಗಳ್ಳನ ಬಂಧನ : ಚಿನ್ನಾಭರಣ ವಶ

ಸುದ್ದಿ ತಿಳಿದು ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಬಂದಿದ್ದು, ಕೂಡಲೇ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ‌.

ABOUT THE AUTHOR

...view details