ಕರ್ನಾಟಕ

karnataka

ನಾಳೆ ವಿಧಾನಸಭೆ ಚುನಾವಣಾ ಫಲಿತಾಂಶ; ಮತ ಎಣಿಕಾ ಕೇಂದ್ರಗಳಿಗೆ ಬಿಗಿ ಭದ್ರತೆ

By

Published : May 12, 2023, 12:27 PM IST

Updated : May 12, 2023, 1:30 PM IST

ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆಯ ಮತ ಎಣಿಕೆ ಕೇಂದ್ರಗಳಿಗೆ ಬಿಗಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

ಮತ ಎಣಿಕಾ ಕೇಂದ್ರಗಳಿಗೆ ಬಿಗಿ ಭದ್ರತೆ
ಮತ ಎಣಿಕಾ ಕೇಂದ್ರಗಳಿಗೆ ಬಿಗಿ ಭದ್ರತೆ

ಬೆಂಗಳೂರು :ವಿಧಾನಸಭಾ ಚುನಾವಣೆ-2023ರ ಮತ ಎಣಿಕಾ ಕಾರ್ಯ ನಾಳೆ ನಡೆಯಲಿದ್ದು ಬೆಂಗಳೂರು ನಗರದ ನಾಲ್ಕು ಹಾಗೂ ಬೆಂಗಳೂರು ಜಿಲ್ಲೆಯ ಒಂದು ಕೇಂದ್ರದ ಸಹಿತ 05 ಮತ ಎಣಿಕೆ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಣಿಕೆ ದಿನದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

1 - ಕೆಆರ್ ಪುರ,ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ, ಪುಲಿಕೇಶಿನಗರ, ಸರ್ವಜ್ಞ ನಗರ ಹಾಗೂ ಸಿವಿ ರಾಮನ್ ನಗರ ಕ್ಷೇತ್ರಗಳ‌ ಮತ ಎಣಿಕಾ ಕಾರ್ಯ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ‌ ನಡೆಯಲಿದ್ದು, ಪೂರ್ವ ಹಾಗೂ ಕೇಂದ್ರ ವಿಭಾಗದ ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ಇರಲಿದೆ.

2- ಆನೇಕಲ್, ಬೆಂಗಳೂರು ದಕ್ಷಿಣ ಮಹದೇವಪುರ, ಬ್ಯಾಟರಾಯನಪುರ ಯಲಹಂಕ ಹಾಗೂ ದಾಸರಹಳ್ಳಿ ಕ್ಷೇತ್ರಗಳ ಮತ ಎಣಿಕಾ ಕಾರ್ಯ ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ನಲ್ಲಿ ನಡೆಯಲಿದ್ದು ಸಿಸಿಬಿಯ ಅಪರಾಧ ವಿಭಾಗದ ಡಿಸಿಪಿ ಹಾಗೂ ವೈಟ್ ಫೀಲ್ಡ್ ವಿಭಾಗದ ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ಇರಲಿದೆ.

3 - ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಿಕ್ಕಪೇಟೆ, ಚಾಮರಾಜಪೇಟೆ, ಆರ್.ಆರ್.ನಗರ ಹಾಗೂ ಶಿವಾಜಿನಗರ ಕ್ಷೇತ್ರಗಳ ಮತ ಎಣಿಕೆ ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆಯಲಿದ್ದು ದಕ್ಷಿಣ ವಿಭಾಗದ ಡಿಸಿಪಿ ಹಾಗೂ ಕಮ್ಯಾಂಡ್ ಸೆಂಟರ್ ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ಇರಲಿದೆ.

4 - ಪದ್ಮನಾಭನಗರ, ಗೋವಿಂದರಾಜನಗರ ವಿಜಯನಗರ, ಜಯನಗರ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ ಹಾಗೂ ಬಸವನಗುಡಿ ಕ್ಷೇತ್ರಗಳ ಮತ ಎಣಿಕಾ ಕಾರ್ಯ ತಿಲಕ್ ನಗರದ ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ನಡೆಯಲಿದ್ದು ಆಗ್ನೇಯ ವಿಭಾಗದ ಡಿಸಿಪಿ ಹಾಗೂ ಸಿಎಆರ್ ದಕ್ಷಿಣ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಭದ್ರತೆ ಇರಲಿದೆ.

5 - ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ಕ್ಷೇತ್ರಗಳ ಮತ ಎಣಿಕೆಯು ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ನಡೆಯಲಿದ್ದು, ಈಶಾನ್ಯ ವಿಭಾಗದ ಡಿಸಿಪಿ ಹಾಗೂ ವಿವಿಐಪಿ ಭದ್ರತಾ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಭದ್ರತೆ ಇರಲಿದೆ.

ಫಲಿತಾಂಶದ ಬಳಿಕವೂ ಕಟ್ಟೆಚ್ಚರ:ಫಲಿತಾಂಶ ಪ್ರಕಟವಾದ ನಂತರ ದಿನಾಂಕ 14-05-2023ರ ಮುಂಜಾನೆಯವರೆಗೂ ಸಶಸ್ತ್ರ ದಳವನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಕ್ರಮ ವಹಿಸಲಾಗಿದೆ. ಪೂರ್ವ ಹಾಗೂ ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರ ಉಸ್ತುವಾರಿಯಲ್ಲಿ 10 ಜನ ಡಿಸಿಪಿ, 15 ಜನ ಎಸಿಪಿ, 38 ಪೊಲೀಸ್‌ ಇನ್ಸ್‌ಪೆಕ್ಟರ್, 250 ಪಿಎಸ್‌ಐ 1200 ಸಿಬ್ಬಂದಿ ಜೊತೆಗೆ 12 ಕೇಂದ್ರಿಯ ಸಿಎಪಿಎಫ್, ತುಕಡಿ, 36 ಕೆಎಸ್‌ಆ‌ರ್ಪಿ, ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಆಯಾ ಸರಹದ್ದಿನಲ್ಲಿ ವಿಶೇಷ ಗಸ್ತು ನೇಮಕ ಮಾಡಿದ್ದು, ಪ್ರತಿಯೊಂದು ವಿಭಾಗದ ಉಸ್ತುವಾರಿಗೆ ಒಬ್ಬರು ಎಸಿಪಿ ನಿಯೋಜಿಸಲಾಗಿದೆ.

ಇದನ್ನೂ ಓದಿ:ಎಡಗೈ ಊತ, ನೋವು; ತಪಾಸಣೆಗೆ ಒಳಗಾದ ಸಿದ್ದರಾಮಯ್ಯ: ಡಿಕೆಶಿ ಆರೋಗ್ಯ ಚೇತರಿಕೆ

Last Updated : May 12, 2023, 1:30 PM IST

ABOUT THE AUTHOR

...view details