ಬೆಂಗಳೂರು:ರಾಜ್ಯದಲ್ಲಿ ಭಾನುವಾರ 112 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಮಹಾಮಾರಿ ಸೋಂಕಿಗೆ ಒಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,062ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 17,273 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 112 ಪಾಸಿಟಿವ್ ಪ್ರಕರಣಗಳು ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,48,747ಕ್ಕೆ ಹೆಚ್ಚಳವಾಗಿದೆ. ಪಾಸಿಟಿವ್ ದರ ಶೇ.0.64ಕ್ಕೆ ಏರಿಕೆ ಕಂಡಿದೆ.
ಇತ್ತ, 92 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದು, ಇದರೊಂದಿಗೆ ಈವರೆಗೆ ಒಟ್ಟು 39,06,679 ಮಂದಿ ಗುಣಮುಖರಾದಂತೆ ಆಗಿದೆ. ಸಾವಿನ ದರ ಶೇ.0.89ರಷ್ಟು ದಾಖಲಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,964ರಷ್ಟಿದೆ.