ಕರ್ನಾಟಕ

karnataka

ETV Bharat / state

ನಾಳಿನ ಕರ್ನಾಟಕ ಬಂದ್‌ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ನೈತಿಕ ಬೆಂಬಲ.. - ರಾಜ್ಯ ಸರ್ಕಾರ ನೌಕರರ ಸಂಘ

ಕನ್ನಡಿಗರಿಗೆ ಕೆಲಸ ಕೊಡಿಸುವ ವಿಚಾರವಾಗಿ ನಾಳೆ ನಡೆಯುತ್ತಿರುವ ಕರ್ನಾಟಕ ಬಂದ್​ಗೆ ಬಾಹ್ಯ ಬೆಂಬಲ ನೀಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆ ಎಲ್ಲ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ತಿಳಿಸಿದ್ದಾರೆ.

Moral Support
ನೈತಿಕ ಬೆಂಬಲ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘ

By

Published : Feb 12, 2020, 8:58 PM IST

ಬೆಂಗಳೂರು:ಕನ್ನಡಿಗರಿಗೆ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಡಾ.ಸರೋಜಿನಿ ಮಹಿಷಿ ನೀಡಿದ್ದ ವರದಿ ಜಾರಿಗೆ ತರಲು ಒತ್ತಾಯಿಸಿ ನಾಳೆ ಬಂದ್‌ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ನೈತಿಕ ಬೆಂಬಲ ನೀಡಿದೆ.

ನಾಳಿನ ಬಂದ್‌ಗೆ ನೈತಿಕ ಬೆಂಬಲ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘ..

ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹಲವು ವರ್ಷಗಳ ಹಿಂದೆಯೇ ವರದಿ ನೀಡಿದ್ದರೂ ಈವರೆಗೂ ಅನುಷ್ಠಾನವಾಗಿಲ್ಲ. ಹೀಗಾಗಿ ಕನ್ನಡಿಗರಿಗೆ ಕೆಲಸ ಕೊಡಿಸುವ ವಿಚಾರವಾಗಿ ನಾಳೆ ನಡೆಯುತ್ತಿರುವ ಕರ್ನಾಟಕ ಬಂದ್​ಗೆ ಬಾಹ್ಯ ಬೆಂಬಲ ನೀಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆ ಎಲ್ಲ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ತಿಳಿಸಿದ್ದಾರೆ.

ABOUT THE AUTHOR

...view details