ದೇವನಹಳ್ಳಿ: ಆರೋಗ್ಯ ಸಚಿವ ಸುಧಾಕರ್ ಮುಂದೆ ಡಿಹೆಚ್ಒ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಹೆಚ್ಒ ರನ್ನು ಸ್ಥಳ ಸೂಚಿಸದೇ ಎತ್ತಂಗಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಡಾ ಕೆ.ಮಂಜುಳಾದೇವಿ ಡಿಹೆಚ್ಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಅವಧಿಯಲ್ಲಿಯೇ ಕೋವಿಡ್ ಮೊದಲ ಅಲೆ ಮತ್ತು ಎರಡನೇ ಅಲೆ ನಿಭಾಯಿಸುವ ದೊಡ್ಡ ಜವಾಬ್ದಾರಿ ಇತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಹು ದೊಡ್ಡ ಜವಾಬ್ದಾರಿ ವಹಿಸಲಾಗಿತ್ತು. ವಿದೇಶದಿಂದ ಬಂದ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡುವ ಮತ್ತು ಚಿಕಿತ್ಸೆ ನೀಡುವ ಜವಾಬ್ದಾರಿ ನಿರ್ವಹಣೆ ಮಾಡಬೇಕಿತ್ತು. ಬೆಂಗಳೂರು ನಗರಕ್ಕೆ ಅಂಟಿಕೊಂಡಿರುವ ಕಾರಣಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಸಹ ಕೊವೀಡ್ ಪ್ರಕರಣ ಸಂಖ್ಯೆ ಹೆಚ್ಚಾಗಿದೆ.