ಕರ್ನಾಟಕ

karnataka

By

Published : May 11, 2020, 10:45 PM IST

ETV Bharat / state

ಎಂಟು ಮಂದಿ ಜಿಲ್ಲಾ ನ್ಯಾಯಾಧೀಶರ ವರ್ಗಾವಣೆಗೊಳಿಸಿ ಹೈಕೋರ್ಟ್​ ಆದೇಶ

ಬೆಂಗಳೂರಿನಲ್ಲಿರುವ ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣದ ಸದಸ್ಯರಾಗಿದ್ದ ನ್ಯಾಯಾಧೀಶ ಬಿ.ಎಸ್.ನಾಯಕ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.

High Court
ಎಂಟು ಮಂದಿ ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ : ಹೈಕೋರ್ಟ್​ನಿಂದ ಆದೇಶ

ಬೆಂಗಳೂರು:ರಾಜ್ಯದ ಎಂಟು ಮಂದಿ ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದೇ ವೇಳೆ ಇಬ್ಬರು ನ್ಯಾಯಾಧೀಶರ ವರ್ಗಾವಣೆಯಲ್ಲಿ ಬದಲಾವಣೆ ಮಾಡಲಾಗಿದೆ.

ಈ ಕುರಿತು ಮೇ 11ರಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ನೋಟಿಫಿಕೇಷನ್ ಹೊರಡಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ಬೆಳಗಾವಿ, ಮಂಡ್ಯ, ಮೈಸೂರಿನ ಜಿಲ್ಲಾ ನ್ಯಾಯಾಲಯಗಳ ತಲಾ ಓರ್ವ ಜಿಲ್ಲಾ ನ್ಯಾಯಾಧೀಶರು ಹಾಗೂ ಬೆಂಗಳೂರಿನ ಮೂವರು ಜಿಲ್ಲಾ ನ್ಯಾಯಾಧೀಶರು ವರ್ಗಾವಣೆ ಆಗಿದ್ದಾರೆ.

ಇನ್ನು ಈ ಹಿಂದೆ ಏ. 24 ಮತ್ತು ಮೇ 5ರಂದು ಹೈಕೋರ್ಟ್ ಮಾಡಿದ್ದ ವರ್ಗಾವಣೆಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿರುವ ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣದ ಸದಸ್ಯರಾಗಿದ್ದ ನ್ಯಾಯಾಧೀಶ ಬಿ.ಎಸ್.ನಾಯಕ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಅದೇ ರೀತಿ ಕೆಎಟಿ ಸದಸ್ಯ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ ಅವರನ್ನು ಕೊಪ್ಪಳ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

For All Latest Updates

ABOUT THE AUTHOR

...view details