ಕರ್ನಾಟಕ

karnataka

ಪೊಲೀಸ್ ಕಮಿಷನರ್ ಲಾಬೂರಾಮ್ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ

By

Published : Nov 13, 2020, 12:24 PM IST

ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್‌ ಲಾಬೂರಾಮ್​​​ ಆರೋಗ್ಯದಲ್ಲಿ ಏರುಪೇರಾದ ಕಾರಣ, ಧಾರವಾಡದ ಎಸ್. ಡಿ. ಎಂ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಏರ್​​ಲಿಫ್ಟ್ ಮಾಡಲಾಗಿದೆ.

Police Commissioner Laburam
ಪೊಲೀಸ್ ಕಮಿಷನರ್ ಲಾಬೂರಾಮ್

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೈಲೆಂಟಾಗಿ ತನ್ನ ಛಾಪು ಮೂಡಿಸಿದ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್‌ ಲಾಬೂರಾಮ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಿಂದ ನಗರದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ನಿನ್ನೆಯೇ ಏರ್​​ಲಿಫ್ಟ್​ ಮಾಡಿ ಚಿಕಿತ್ಸೆ ಕೊಡಲಾಗ್ತಿದೆ.

ಮಣಿಪಾಲ್ ಆಸ್ಪತ್ರೆಯ ಮೂಲಗಳ ಪ್ರಕಾರ, ಸದ್ಯ ಆರೋಗ್ಯದಲ್ಲಿ ಕೊಂಚ ಚೇತರಿಕೆ ಇದ್ದು, ತೀವ್ರಾ ನಿಗಾ ಘಟಕದಲ್ಲಿ ಇರಿಸಲಾಗಿದೆ. ಲಾಬೂರಾಮ್ ನಗರದ ಉತ್ತರ ವಿಭಾಗ ಡಿಸಿಪಿಯಾಗಿ ಬಹಳಷ್ಟು ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಈ ಹಿಂದೆ ಇವರಿಗೆ ಜ್ವರ ಮತ್ತು ಗಂಟಲಿನ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ, ಧಾರವಾಡದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಬೆಂಗಳೂರಿನಲ್ಲಿ ಗೊತ್ತಿರುವ ವೈದ್ಯರಿಂದ ಚಿಕಿತ್ಸೆ ಕೊಡಿಸಲು ಮಣಿಪಾಲ್ ಆಸ್ಪತ್ರೆಗೆ ಏರ್​ಲಿಫ್ಟ್​ ಮಾಡಲಾಗಿದೆ ಎಂದು ತಿಳಿದು ಬಂದಿದೆ.

For All Latest Updates

TAGGED:

ABOUT THE AUTHOR

...view details