ಕರ್ನಾಟಕ

karnataka

ETV Bharat / state

ಪೊಲೀಸರ ಗಸ್ತು ವೇಳೆ ಇಬ್ಬರ ಬಂಧನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ - ಸಂಜಯ್​ನಗರ ಠಾಣಾ ಪೊಲೀಸರಿಂದ ಇಬ್ಬರ ಬಂಧನ

ನಗರದಲ್ಲಿ ಕಳ್ಳತನಕ್ಕೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಸಂಜಯ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಖದೀಮರು ಅಂದರ್
ಇಬ್ಬರು ಖದೀಮರು ಅಂದರ್

By

Published : Jul 27, 2021, 2:47 PM IST

ಬೆಂಗಳೂರು: ಗಸ್ತು ತಿರುಗುತ್ತಿದ್ದ ವೇಳೆ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ಇಬ್ಬರು ಚಾಲಾಕಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಸಯ್ಯದ್​ ರಫೀಕ್​, ಕಾರ್ತಿಕ್​ ಬಂಧಿತರು. ಆರೋಪಿಗಳಿಂದ ಆರು ಲಕ್ಷ ಬೆಲೆ ಬಾಳುವ 105 ಗ್ರಾಂ ಚಿನ್ನಾಭರಣ, 2 ದ್ವಿಚಕ್ರ ವಾಹನ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ಗಸ್ತಿನಲ್ಲಿರಬೇಕಾದರೆ ಅನುಮಾನಾಸ್ಪದ ರೀತಿಯಲ್ಲಿ ಇವರಿಬ್ಬರು ತಿರುಗಾಡುತ್ತಿದ್ದರು. ಈ ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೃತ್ಯವನ್ನು ಬಾಯ್ಬಿಟ್ಟಿದ್ದರು.

ಇದನ್ನೂ ಓದಿ: ಮಕ್ಕಳ ಕಳ್ಳಸಾಗಣೆ ಪ್ರಕರಣ: 16 ಮಂದಿಯನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

ಈ ಹಿಂದೆ ಒಬ್ಬ ಆರೋಪಿ ಡ್ರೈ ಫ್ರೂಟ್ಸ್ ಅಂಗಡಿಯಲ್ಲಿ ಹಣ ಮತ್ತು ವಾಹನ ಕಳವು ಮಾಡಿಕೊಂಡು ಪರಾರಿಯಾಗಿದ್ದ. ಮತ್ತೊಬ್ಬ ಆರೋಪಿ ಆಸ್ಪತ್ರೆ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಎಗರಿಸಿದ್ದ ಆರೋಪದಡಿ ಇಬ್ಬರ ವಿರುದ್ಧ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ABOUT THE AUTHOR

...view details