ಕರ್ನಾಟಕ

karnataka

ETV Bharat / state

ಈಶ್ವರಪ್ಪ, ಆರಗ ಜ್ಞಾನೇಂದ್ರ ರಾಜೀನಾಮೆಗೆ ಖಾದರ್ ಆಗ್ರಹ - ಈಶ್ವರಪ್ಪ, ಆರಗ ಜ್ಞಾನೇಂದ್ರ ರಾಜೀನಾಮೆಗೆ ಖಾದರ್ ಆಗ್ರಹ

ಶಿವಮೊಗ್ಗ ಘಟನೆಯನ್ನ ತೀವ್ರವಾಗಿ ಖಂಡಿಸುತ್ತೇವೆ. ಈಶ್ವರಪ್ಪ ಆಧಾರ ರಹಿತವಾಗಿ ಹೇಳಿಕೆ‌ ನೀಡಿದ್ದಾರೆ ಎಂದು ಕಾಂಗ್ರೆಸ್ ಉಪನಾಯಕ ಯು. ಟಿ ಖಾದರ್ ತಿಳಿಸಿದ್ದಾರೆ.

u-t-khadhar
ಯು. ಟಿ ಖಾದರ್

By

Published : Feb 21, 2022, 5:42 PM IST

ಬೆಂಗಳೂರು:ಗೃಹಸಚಿವ ಆರಗ ಜ್ಞಾನೇಂದ್ರ ಹಾಗು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್ ಈಶ್ವರಪ್ಪ ರಾಜೀನಾಮೆಗೆ ವಿಧಾನಸಭೆ ಕಾಂಗ್ರೆಸ್ ಉಪನಾಯಕ ಯು. ಟಿ ಖಾದರ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಉಪನಾಯಕ ಯು. ಟಿ ಖಾದರ್ ಮಾತನಾಡಿದರು

ವಿಧಾನಸೌಧದಲ್ಲಿ ಸುದ್ದಿಗಾರ ಜೊತೆ ಮಾತನಾಡಿ, ಶಿವಮೊಗ್ಗ ಘಟನೆಯನ್ನ ತೀವ್ರವಾಗಿ ಖಂಡಿಸುತ್ತೇವೆ. ಈಶ್ವರಪ್ಪ ಆಧಾರ ರಹಿತವಾಗಿ ಹೇಳಿಕೆ‌ ನೀಡಿದ್ದಾರೆ. ಕಾಂಗ್ರೆಸ್ ಮೇಲೆ ಆರೋಪ ಮಾಡಿದ್ದಾರೆ. ಇಂಟೆಲಿಜೆನ್ಸ್‌ ಏನು ಮಾಡುತ್ತಿದೆ. ಇದು ರಾಜ್ಯ ಸರ್ಕಾರಕ್ಕೆ ಗೊತ್ತಾಗಲೇ ಇಲ್ಲವಾ ?. ಯಾರು ತಪ್ಪು ಮಾಡಿದ್ದಾರೋ ಅವರನ್ನ ಪತ್ತೆ ಹಚ್ಚಿ ಶಿಕ್ಷಿಸಲಿ. ನಿರ್ದಿಷ್ಟ ಸಮುದಾಯದ ಮೇಲೆ ಈಶ್ವರಪ್ಪ ಆರೋಪ ಮಾಡಿದ್ದಾರೆ. ಇದು ಸರಿಯಲ್ಲ ಎಂದರು.

ಗೃಹ ಸಚಿವರ ಜಿಲ್ಲೆಯಲ್ಲೇ ಇಂತಹ ಘಟನೆ ನಡೆದಿದೆ. ಇಷ್ಟೆಲ್ಲ ಆದರೂ ಸರ್ಕಾರ ಎಲ್ಲಿದೆ?. ಸಮಸ್ಯೆ ನಿಭಾಯಿಸುವ ಬದಲು ವಿದ್ಯಾರ್ಥಿಗಳ ಮೇಲೆ ಮೊಕದ್ದಮೆ ದಾಖಲಿಸಲಾಗುತ್ತಿದೆ. ಗೃಹ ಸಚಿವರು ಘಟನೆಯ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇವರೂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಓದಿ:ಗೃಹ ಸಚಿವರ ರಾಜೀನಾಮೆ ಕೇಳಲು ಕಾಂಗ್ರೆಸ್​ಗೆ ನೈತಿಕ ಹಕ್ಕಿಲ್ಲ: ರೇಣುಕಾಚಾರ್ಯ

For All Latest Updates

TAGGED:

ABOUT THE AUTHOR

...view details