ಬೆಂಗಳೂರು: ಆಪರೇಶನ್ ಕಮಲಕ್ಕೆ ಒಳಗಾಗಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಡಾ. ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭೆ ಕ್ಷೇತ್ರಕ್ಕೆ ಮೇ 19ರಂದು ಉಪಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ವೇಳಾಪಟ್ಟಿಯನ್ನ ಪ್ರಕಟಿಸಿದ್ದು, ಏಪ್ರಿಲ್ 22ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಏ. 22ರಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಏ. 29 ಉಮೇದುವಾರಿಕೆ ಸಲ್ಲಿಸಲು ಕಡೆಯ ದಿನವಾಗಿದೆ. ಏ. 30ರಂದು ನಾಮಪತ್ರ ಪರಿಶೀಲನೆ. ಮೇ 2ಕ್ಕೆ ನಾಮಪ್ರ ಹಿಂದಕ್ಕೆ ಪಡೆಯಲು ಕಡೆಯ ದಿನವಾಗಿರುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯಲ್ಲಿ ತಿಳಿಸಿದೆ. ಇನ್ನು ಮೇ 19 ರಂದು ಉಪಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ.